Advertisement

ರಾಜ್ಯಸಭೆಯ ಪ್ರತಿಪಕ್ಷ ನಾಯಕನಾಗಿ ಮಲ್ಲಿಕಾರ್ಜುನ ಖರ್ಗೆ ನೇಮಕ

10:42 PM Feb 16, 2021 | Team Udayavani |

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕ, ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ರಾಜ್ಯಸಭೆಯ ಪ್ರತಿಪಕ್ಷ ನಾಯಕನಾಗಿ ಅಧಿಕೃತವಾಗಿ ನೇಮಕಗೊಂಡಿದ್ದಾರೆ.

Advertisement

ಪ್ರತಿಪಕ್ಷ ನಾಯಕನಾಗಿದ್ದ ಗುಲಾಂ ನಬಿ ಆಜಾದ್‌ ಅವರ ಅಧಿಕಾರಾವಧಿ ಮಂಗಳವಾರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರ ಸ್ಥಾನವನ್ನು ಖರ್ಗೆ ಅಲಂಕರಿಸಿದ್ದಾರೆ. ಅವರ ನೇಮಕವನ್ನು ಅಧಿಕೃತಗೊಳಿಸಿ ಮಂಗಳವಾರ ರಾಜ್ಯಸಭಾ ಅಧ್ಯಕ್ಷರು, ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರ ಕಾರ್ಯಾಲಯ ಪ್ರಕಟಣೆ ಹೊರಡಿಸಿದೆ.

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಖರ್ಗೆ ಅವರ ಹೆಸರನ್ನು ಶಿಫಾರಸು ಮಾಡಿ ಸಭಾಧ್ಯಕ್ಷರಿಗೆ ಇತ್ತೀಚೆಗಷ್ಟೇ ಪತ್ರ ಬರೆದಿದ್ದರು.

ಇದನ್ನೂ ಓದಿ:ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಕಿರಣ್ ಬೇಡಿ ತೆರವು

Advertisement

Udayavani is now on Telegram. Click here to join our channel and stay updated with the latest news.

Next