ಎರಡೂ ಕಡೆ ಸಿದ್ದರಾಮಯ್ಯ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.
Advertisement
ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಮ್ಮನಕಟ್ಟಿಯವರ ಆರೋಗ್ಯ ಸರಿಯಿಲ್ಲದ ಕಾರಣ ಅವರೊಂದಿಗೆ ಪಕ್ಷ ಮಾತುಕತೆ ನಡೆಸಿತ್ತು. ತಮಗೆ ಟಿಕೆಟ್ ನೀಡಬೇಕು ಇಲ್ಲದಿದ್ದರೆ ಮುಖ್ಯಮಂತ್ರಿ ಸ್ಪರ್ಧಿಸಬೇಕು ಎಂದು ಮನವಿ ಮಾಡಿದ್ದರು. ಆ ಕ್ಷೇತ್ರದ ಜನರು ಸಹ ಇದನ್ನೇ ಬಯಸಿದ್ದಾರೆ. ಪರಿಸ್ಥಿತಿ ಹೀಗಿರುವುದರಿಂದ ಸಿದ್ದರಾಮಯ್ಯ ಅವರು ಎರಡು ಕಡೆ ಸ್ಪರ್ಧಿಸುತ್ತಿದ್ದಾರೆ. ಹಿಂದೆ ಮೋದಿಯವರು ಎರಡು ಕ್ಷೇತ್ರದಿಂದ ಸ್ಪರ್ಧಿಸಿದಾಗ ಈ ಪ್ರಶ್ನೆ ಉದ್ಭವಿಸಿತ್ತೇ ಎಂದು ಪ್ರಶ್ನಿಸಿದರು.