Advertisement

ಅಂಬೇಡ್ಕರ್‌ಗೆ ಗೌರವ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

12:10 AM Oct 29, 2022 | Team Udayavani |

ಹೊಸದಿಲ್ಲಿ: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ಹೊಸದಿಲ್ಲಿ ಯಲ್ಲಿರುವ ಡಾ| ಬಿ.ಆರ್‌.ಅಂಬೇಡ್ಕರ್‌ ಅವರ ಸ್ಮಾರಕ ಮತ್ತು ಮೌಲಾನಾ ಅಬುಲ್‌ ಕಲಾಂ ಅಜಾದ್‌ ಅವರ ಸಮಾಧಿಗೆ ಭೇಟಿ ನೀಡಿ ಗೌರವ ಸಲ್ಲಿಸಿದರು.

Advertisement

ನಂತರ ಟ್ವೀಟ್‌ ಮಾಡಿದ ಅವರು, “ಧರ್ಮದಲ್ಲಿ ಭಕ್ತಿಯು ಮೋಕ್ಷದ ಹಾದಿ ಯಾಗಿರಬಹುದು. ಆದರೆ ರಾಜಕೀಯದಲ್ಲಿ ಭಕ್ತಿ ಅಥವಾ ಆರಾಧನೆಯು ಅವ ನತಿಗೆ ಮತ್ತು ಅಂತಿಮವಾಗಿ ಸರ್ವಾಧಿ ಕಾರಕ್ಕೆ ಖಚಿತ ವಾದ ಮಾರ್ಗವಾಗಿದೆ,’ ಎಂದು ಬರೆದುಕೊಂಡಿದ್ದಾರೆ.

“ಮೌಲಾನಾ ಅಬುಲ್‌ ಕಲಾಂ ಅಜಾದ್‌ ಅವರು ಮಹಾನ್‌ ಸ್ವಾತಂತ್ರ್ಯ ಹೋರಾಟಗಾರರು. ದೇಶದ ಮೊದಲ ಶಿಕ್ಷಣ ಸಚಿವ ರಾಗಿದ್ದಾರೆ. ಅವರು ಪ್ರಜಾಪ್ರಭುತ್ವ ಮತ್ತು ಜಾತ್ಯಾತೀತ ಸಿದ್ಧಾಂತದ ಬಗ್ಗೆ ನಂಬಿಕೆ ಹೊಂದಿದ್ದರು. ಧರ್ಮದ ಆಧಾರದಲ್ಲಿ ದೇಶ ವಿಭಜನೆ ಯನ್ನು ಬಲವಾಗಿ ಖಂಡಿಸಿದ್ದರು,’ ಎಂದೂ ಖರ್ಗೆ ಟ್ವೀಟ್‌ ಮಾಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next