Advertisement

ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ಕಡಿಮೆ

03:10 PM Feb 15, 2021 | Team Udayavani |

ದೇವನಹಳ್ಳಿ: ಜಿಲ್ಲೆಯಲ್ಲಿ ಅಂತರ್ಜಲ ಕುಸಿತದಿಂದ ನೀರಿನ ಫ್ಲೋರೈಡ್‌ ಅಂಶ ಹೆಚ್ಚಾಗಿದ್ದು, ನಾನಾ ರೀತಿಯಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂಬ ಅಂಶದ ನಡುವೆಯೂ ಅಪೌಷ್ಟಿಕ ಮಕ್ಕಳ ಸಂಖ್ಯೆ ವರ್ಷಕ್ಕಿಂತ, ವರ್ಷ ಸಂಖ್ಯೆ ಕಡಿಮೆಯಾಗುತ್ತಿದೆ.

Advertisement

ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ 22 ಇದ್ದು, ಅಪೌಷ್ಟಿಕ ಮಕ್ಕಳ ಸಂಖ್ಯೆಯಲ್ಲಿ ತೀವ್ರ ಇಳಿಮುಖ ಕಂಡುಬರುವುದರ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ದಾರಿಯಾಗಿದೆ. ಸರ್ಕಾರ ಅಂಗನವಾಡಿಗಳಲ್ಲಿ ಹಾಲು, ಮೊಟ್ಟೆ ವಿತರಣೆ ಮಾಡುತ್ತಿರುವುದು ಸಹಕಾರಿಯಾಗಿದೆ. ಅಪೌಷ್ಟಿಕ ನಿವಾರಣೆಗೆ ಪೋಷಕರು ಮಾತ್ರವಲ್ಲದೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಹಮ್ಮಿ ಕೊಳ್ಳುವ ಪೋಷಣ ಅಭಿಯಾನ ಕಾರ್ಯಕ್ರಮವು ಕೂಡ ಪ್ರಮಾಣ ತಗ್ಗಿಸುವಲ್ಲಿ ನೆರವಾಗಿದೆ. ಕಳೆದ 4 ವರ್ಷಗಳಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆಯಲ್ಲಿ ಇಳಿ ಮುಖವಾಗಿರುವುದು ಉತ್ತಮ ಬೆಳವಣಿಗೆಯಾಗಿದೆ.

ಪೌಷ್ಟಿಕ ಆಹಾರ ಸೇವಿಸಲು ಉತ್ತೇಜನ: ತೀವ್ರ ಅಪೌಷ್ಟಿಕ ಮಕ್ಕಳನ್ನು ಗುರುತಿಸುವಿಕೆ ಮತ್ತು ಚಿಕಿತ್ಸೆ ನೀಡುವುದು. ಕೈ ತೋಟಗಳನ್ನು ಬಳಸಿ, ಪೌಷ್ಟಿಕ ಆಹಾರ ಸೇವಿಸಲು ಉತ್ತೇಜಿಸುವಂತಹ ಚಟುವಟಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈಗಾಗಲೇ ತೋಟಗಾರಿಕೆ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳ ಸುತ್ತ ಕಿಚನ್‌ ಗಾರ್ಡ್‌ ನ್‌ ನಿರ್ಮಿಸಿ, ಕರಿಬೇವು, ಸೀಬೆ, ಹಲಸು, ನುಗ್ಗೆ ಇತೆ ಗಿಡ ನೆಟ್ಟುಪೋಷಿಸಿ ಅದರಲ್ಲಿ ಬರುವ ಪೌಷ್ಟಿಕ ಆಹಾರದ ಅಂಶಗಳನ್ನು ನೀಡುವ ಕಾರ್ಯ ಮಾಡಲಾಗಿದೆ.

ಚಿಕಿತ್ಸೆಗೆ 2000 ರೂ. :  ಪೌಷ್ಟಿಕ ಆಹಾರವನ್ನು 6 ತಿಂಗಳಿನಿಂದ 6 ವರ್ಷದೊರಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಪೌಷ್ಟಿಕ, ಹಾಲು, ಪುಷ್ಟಿ ಪೌಡರ್‌, ಅಪೌಷ್ಟಿಕ ಮಕ್ಕಳಿಗೆ ಚಿಕಿತ್ಸೆ ವೆಚ್ಚ 2000 ರೂ. ಗಳನ್ನು ನೀಡಲಾಗುತ್ತಿದೆ. ಅಪೌಷ್ಟಿಕ ಮಕ್ಕಳಿಗೆ ದೊಡ್ಡಬಳ್ಳಾಪುರದಲ್ಲಿ ಚಿಕಿತ್ಸೆ ಸಹ ನೀಡಲಾಗುತ್ತಿದೆ. ಉತ್ತರ ಭಾರತ, ಉತ್ತರ ಕರ್ನಾಟಕ ಭಾಗದಲ್ಲಿ ಕಂಡುಬರುವಂತೆ ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಹೇಳುತ್ತಾರೆ.

ಅಪೌಷ್ಟಿಕ ಇಳಿಮುಖ :

Advertisement

ಅಪೌಷ್ಟಿಕ ಮಕ್ಕಳು ಜಿಲ್ಲೆಯಲ್ಲಿ 22 ಇದ್ದು, ತಾಲೂಕುವಾರು ಅಂಕಿ-ಅಂಶ ಪ್ರಕಾರ ದೇವನ ಹಳ್ಳಿ-4, ದೊಡ್ಡಬಳ್ಳಾಪುರ-13, ಹೊಸಕೋಟೆ-2, ನೆಲಮಂಗಲ-3 ಅಪೌಷ್ಟಿಕ ಮಕ್ಕಳಿದ್ದಾರೆ. 2016- 17ರಲ್ಲಿ 169, 2017-18ರಲ್ಲಿ 120, 2018-19ರಲ್ಲಿ 35 ಹಾಗೂ 2019-20ರಲ್ಲಿ 26, ಪ್ರಸ್ತುತ ವರ್ಷದಲ್ಲಿ 22 ಅಪೌಷ್ಟಿಕ ಮಕ್ಕಳನ್ನು ಹೊಂದಿದೆ

ಅಪೌಷ್ಟಿಕ ಮಕ್ಕಳು ಕಂಡುಬಂದಲ್ಲಿ ಅವರಿಗೆ ತಕ್ಷಣ ಚಿಕಿತ್ಸೆ ಕೊಡಿಸುವುದು. ಬೇರೆ ಜಿಲ್ಲೆಗೆಹೋಲಿಸಿದರೆ, ನಮ್ಮಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆಕಡಿಮೆಯಾಗಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ,ಆರೋಗ್ಯವಂತ ಮಕ್ಕಳನ್ನಾಗಿ ಮಾಡಲಾಗುತ್ತದೆ. ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದೆಂಬುವುದು ನಮ್ಮ ಗುರಿ. ಪುಷ್ಪಲತಾ ರಾಯ್ಕರ್‌, ಉಪ ನಿರ್ದೇಶಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ

Advertisement

Udayavani is now on Telegram. Click here to join our channel and stay updated with the latest news.

Next