Advertisement

ಕಡೆಕಾರು: ಅನಾರೋಗ್ಯದಿಂದ ಮನನೊಂದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

06:05 PM Feb 15, 2023 | Team Udayavani |

ಮಲ್ಪೆ: ಕಡೆಕಾರು ಗ್ರಾಮ ಪಂಚಾಯತ್‌ನಲ್ಲಿ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Advertisement

ಕಡೆಕಾರು ನಿವಾಸಿ ಮುರಳಿ (54) ಆತ್ಮಹತ್ಯೆ ಮಾಡಿಕೊಂಡವರು. ಒಂದು ವರ್ಷದಿಂದ ಜಾಂಡೀಸ್‌ ಕಾಯಿಲೆಯಿಂದ ಬಳಲುತ್ತಿದ್ದ ಅವರು ವಾರದ ಹಿಂದೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದರು. ಮಂಗಳವಾರ ಮಧ್ಯಾಹ್ನದ ವೇಳೆ ಮನೆಯಲ್ಲಿದ್ದು ಹೊಟ್ಟೆ ನೋವು ಎಂದು ಹೇಳುತ್ತಿದ್ದರು.

ಸಂಜೆ ವೇಳೆ ಮುರಳಿ ಅವರ ಮೃತದೇಹವು ಮನೆ ಸಮೀಪ ಕಡೆಕಾರು ಗ್ರಾ. ಪಂ. ಗೆ ಸೇರಿದ ಬಾವಿಯಲ್ಲಿ ಪತ್ತೆಯಾಗಿದೆ. ಅನಾರೋಗ್ಯದ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂಬುದಾಗಿ ಮೃತರ ತಮ್ಮ ಸುರೇಶ ಎಂಬವರು ನೀಡಿದ ಮಾಹಿತಿಯಂತೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗರಡಿಮಜಲು: ಗಾಂಜಾ ಸೇವನೆ, ವ್ಯಕ್ತಿ ವಶಕ್ಕೆ
ಮಲ್ಪೆ: ಗಾಂಜಾ ಸೇವನೆ ಮಾಡಿದ ವ್ಯಕ್ತಿಯನ್ನು ಫೆ. 13ರಂದು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಯೋಗೀಶ (21) ಬಂಧಿತ ವ್ಯಕ್ತಿ. ಈತ ತೆಂಕನಿಡಿಯೂರು ಗ್ರಾಮದ ಗರಡಿಮಜಲು ಈಶ್ವರ ದೇವಸ್ಥಾನದ ಬಳಿ ಅಮಲು ಪದಾರ್ಥ ಸೇವಿಸಿ ತೂಗಾಡುತಿದ್ದು ಆತನ ಬಾಯಿಯಿಂದ ಗಾಂಜಾದಂತಹ ವಾಸನೆ ಬರುತ್ತಿದ್ದು ವೈದ್ಯಕೀಯ ತಪಾಸಣೆ ಮಾಡಿದಾಗ ಗಾಂಜಾ ಸೇವಿಸಿರುವುದು ದೃಡವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next