Advertisement

Malpe “ಅನಿವಾಸಿ ಭಾರತೀಯ ಕುಟುಂಬದ ಸುರಕ್ಷತೆಗೆ ಪ್ರತ್ಯೇಕ ನೀತಿ’

12:54 AM Nov 27, 2023 | Team Udayavani |

ಮಲ್ಪೆ: ವಿದೇಶದಲ್ಲಿ ದುಡಿಯುವ ಅನಿವಾಸಿ ಭಾರತೀಯ ಕುಟುಂಬದ ಸುರಕ್ಷತೆಗಾಗಿ ಪ್ರತ್ಯೇಕ ನೀತಿ ಮತ್ತು ಸಚಿವಾಲಯ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಉಪಾಧ್ಯಕ್ಷೆ ಡಾ| ಆರತಿ ಕೃಷ್ಣ ಹೇಳಿದರು.

Advertisement

ಅವರು ಒಂದೇ ಕುಟುಂಬದ ನಾಲ್ವರ ಹತ್ಯೆ ನಡೆದ ನೇಜಾರಿನ ತೃಪ್ತಿ ಲೇಔಟ್‌ನಲ್ಲಿರುವ ಮನೆಗೆ ರವಿವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ, ಈ ಘಟನೆಯಿಂದ ನೂರ್‌ ಮುಹಮ್ಮದ್‌ ಅವರಂತೆ ವಿದೇಶದಲ್ಲಿ ದುಡಿಯುವ ಅನಿವಾಸಿ ಕನ್ನಡಿಗರು ಬಹಳಷ್ಟು ಆತಂಕಕ್ಕೀಡಾಗಿದ್ದಾರೆ. ಪ್ರಕರಣದ ವಿಚಾರಣೆಗಾಗಿ ತ್ವರಿತ ನ್ಯಾಯಾಲಯ ಸ್ಥಾಪನೆ ಮತ್ತು ವಿಶೇಷ ಸರಕಾರಿ ಅಭಿಯೋಜಕರ ನೇಮಕ ಕುರಿತು ಮುಖ್ಯಮಂತ್ರಿ ಜತೆ ಮಾತುಕತೆ ನಡೆಸಲಾಗುವುದು.

ಈ ಪ್ರಕರಣದಲ್ಲಿ ಕುಟುಂಬಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಹೋರಾಟ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಡಾ| ಆರತಿ ಕೃಷ್ಣ ಅವರಿಗೆ ನೂರ್‌ ಮುಹಮ್ಮದ್‌ ಮನವಿಯನ್ನು ಸಲ್ಲಿಸಿದರು. ಕಾಂಗ್ರೆಸ್‌ ಮುಖಂಡರಾದ ಎಂ. ಎ. ಗಫೂರ್‌, ಪ್ರಸಾದ್‌ರಾಜ್‌ ಕಾಂಚನ್‌, ರಮೇಶ್‌ ಕಾಂಚನ್‌, ನೂರು ಮುಹಮ್ಮದ್‌ ಕುಟುಂಬದ ಅಶ್ರಫ್‌ ಕೆ. ಮೊದಲಾದವರು ಉಪಸ್ಥಿತರಿದ್ದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next