Advertisement

ಎನ್ ಆರ್ ಸಿ, ಪೌರತ್ವ ಕಾಯ್ದೆ ಹಿಂಪಡೆಯುವವರೆಗೂ ಪ್ರತಿಭಟನೆ ನಿಲ್ಲದು: ಮಮತಾ ಬ್ಯಾನರ್ಜಿ

09:51 AM Dec 17, 2019 | keerthan |

ಕೋಲ್ಕತ್ತಾ: ಕೇಂದ್ರ ಸರಕಾರದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೇಶದ ಹಲವೆಡೆ ಭಾರಿ ಪ್ರತಿಭಟನೆಗಳಾಗುತ್ತಿದ್ದು, ಕೋಲ್ಕತ್ತಾದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೆಗಾ ರಾಲಿ ನಡೆಸಿ ಪ್ರತಿಭಟನೆ ನಡೆಸಿದರು.

Advertisement

ಈ ವೇಳೆ ಮಾತನಾಡಿದ ಮಮತಾ ಬ್ಯಾನರ್ಜಿ, ಕೇಂದ್ರ ಸರಕಾರ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ ಆರ್ ಸಿ ಹಿಂಪಡೆಯುವವರೆಗೆ ಪ್ರತಿಭಟನೆಯನ್ನು ಕೊನೆಗೊಳಿಸುವುದಿಲ್ಲ ಎಂದು ಹೇಳಿದರು.

ನಗರದ ಕೆಂಪು ರಸ್ತೆಯಿಂದ ಆರಂಭವಾದ ರಾಲಿ ಸುಮಾರು 4 ಕಿ .ಮೀ ಸಾಗಿ ರವೀಂದ್ರ ನಾಥ್ ಠಾಗೋರ್ ಅವರ ನಿವಾಸದ ಬಳಿ ಸಮಾವೇಶಗೊಂಡಿತು.

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಈಶಾನ್ಯ ರಾಜ್ಯಗಳು, ಪಶ್ಚಿಮ ಬಂಗಾಳ, ದೆಹಲಿ ಸೇರಿದಂತೆ ದೇಶದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿದೆ. ಕೆಲವು ಕಡೆ ಇದು ಹಿಂಸಾರೂಪಕ್ಕೂ ತಿರುಗಿದೆ.

Advertisement

Udayavani is now on Telegram. Click here to join our channel and stay updated with the latest news.

Next