Advertisement

ಪಶ್ಚಿಮಬಂಗಾಳ: ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ, ಕಾಲಿಗೆ ಗಾಯ

07:01 PM Mar 10, 2021 | Team Udayavani |

ಕೋಲ್ಕತಾ: ಮುಂಬರುವ ವಿಧಾಣಸಭಾ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಲು ಬುಧವಾರ(ಮಾರ್ಚ್ 10) ಮಮತಾ ಬ್ಯಾನರ್ಜಿ ನಾಮಪತ್ರ ಸಲ್ಲಿಸಲು ತೆರಳಿದ್ದ ವೇಳೆ ಹೈಡ್ರಾಮಾ ನಡೆದಿದ್ದು, ಈ ವೇಳೆ ಹಲ್ಲೆ ನಡೆಸಿರುವ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ.

Advertisement

ತನ್ನ ಮೇಲೆ ಹಲ್ಲೆ ನಡೆಯುತ್ತಿರುವಾಗ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದರು ಎಂದು ಮಮತಾ ಬ್ಯಾನರ್ಜಿ ಈ ಸಂದರ್ಭದಲ್ಲಿ ಆರೋಪಿಸಿದ್ದಾರೆ. ನಂದಿಗ್ರಾಮದಲ್ಲಿ ನಡೆದ ಘಟನೆ ಬಗ್ಗೆ ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೋದಲ್ಲಿ ನೆಲದ ಮೇಲೆ ಬಿದ್ದಿದ್ದ ಮಮತಾ ಬ್ಯಾನರ್ಜಿ ಅವರನ್ನು ಭದ್ರತಾ ಸಿಬ್ಬಂದಿಗಳು ಎತ್ತಿ ಕಾರಿನ ಹಿಂಬದಿ ಸೀಟಿನಲ್ಲಿ ಕುಳ್ಳಿರಿಸಿರುವುದು ದಾಖಲಾಗಿದೆ.

ಮೂಲಗಳ ಪ್ರಕಾರ ಕಾರಿನೊಳಗೆ ಕುಳಿತುಕೊಳ್ಳಲು ಹೋದ ಸಂದರ್ಭದಲ್ಲಿ ನಾಲ್ಕೈದು ಮಂದಿ ಏಕಾಏಕಿ ದಾಳಿ ನಡೆಸಿದ್ದು, ಇದರಿಂದಾಗಿ ಆಯ ತಪ್ಪಿ ಬಿದ್ದ ಮಮತಾ ಬ್ಯಾನರ್ಜಿ ಅವರ ಕಾಲಿಗೆ ಗಾಯವಾಗಿರುವುದಾಗಿ ತಿಳಿಸಿದೆ.

ಈ ಬಾರಿ ತಮ್ಮ ಭವಾನಿಪುರ್ ಕ್ಷೇತ್ರದಿಂದ ನಂದಿಗ್ರಾಮಕ್ಕೆ ವಲಸೆ ಬಂದಿರುವ ಮಮತಾ ಬ್ಯಾನರ್ಜಿ ಇಂದು ನಾಮಪತ್ರ ಸಲ್ಲಿಸಲು ಆಗಮಿಸಿದ್ದರು. ನಂದಿಗ್ರಾಮದಲ್ಲಿ ಬಿಜೆಪಿಯಿಂದ ಸುವೇಂದು ಅಧಿಕಾರಿ ಸ್ಪರ್ಧಿಸಲಿದ್ದು, ಮಮತಾ ಸುವೇಂದುವಿಗೆ ಸಡ್ಡು ಹೊಡೆದು ಅಖಾಡಕ್ಕಿಳಿಯುವುದಾಗಿ ಘೋಷಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next