Advertisement

ಎನ್‌ಡಿಎ ತೊರೆದ ಟಿಡಿಪಿ ನಿರ್ಧಾರಕ್ಕೆ ಮಮತಾ ಬ್ಯಾನರ್ಜಿ ಸ್ವಾಗತ

04:57 PM Mar 16, 2018 | Team Udayavani |

ಕೋಲ್ಕತ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ತೊರೆದ ಟಿಡಿಪಿ ನಿರ್ಧಾರವನ್ನು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವಾಗತಿಸಿದ್ದಾರೆ.

Advertisement

ಬಿಜೆಪಿಯಿಂದಾಗುತ್ತಿರುವ ದೌರ್ಜನ್ಯ, ಆರ್ಥಿಕ ವಿಪ್ಲವ ಮತ್ತು ರಾಜಕೀಯ ಅಸ್ಥಿರತೆಯ ವಿರುದ್ಧ ಹೋರಾಡಲು ಎಲ್ಲ ವಿರೋಧ ಪಕ್ಷಗಳು ಒಗ್ಗೂಡಬೇಕು ಎಂದವರು ಕರೆ ನೀಡಿದ್ದಾರೆ. 

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರಕಾರ ನೀಡದಿರುವುದಕ್ಕೆ ಪ್ರತಿಭಟನೆಯಾಗಿ ಟಿಡಿಪಿ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರದಿಂದ ಹೊರಬಂದಿದ್ದು  ಸರಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವುದಾಗಿ ಹೇಳಿದೆ. 

Advertisement

Udayavani is now on Telegram. Click here to join our channel and stay updated with the latest news.

Next