Advertisement

ಮಮತಾ ಬ್ಯಾನರ್ಜಿ ಪರಿಣಾಮ ಎದುರಿಸುತ್ತಾರೆ: ಅಮಿತ್‌ ಶಾ ವಾರ್ನಿಂಗ್‌ 

01:23 PM Feb 06, 2019 | Team Udayavani |

ಅಲಿಗಢ್‌ : ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಪಶ್ಚಿಮ ಬಂಗಾಳ ಪ್ರವೇಶಿಸದಂತೆ ತಡೆಯುತ್ತಿರುವ ಮುಖ್ಯಮಂತ್ರಿ ಮಮತಾ ಬ್ಯಾಜರ್ಜಿ ಅವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರು ಎಚ್ಚರಿಕೆ ನೀಡಿದ್ದು, ನಿಮ್ಮ ಕ್ರಮಗಳಿಗೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಗುಡುಗಿದ್ದಾರೆ. 

Advertisement

ಬಿಜೆಪಿ ಬೃಹತ್‌ ಸಮಾವೇಶ ಉದ್ದೇಶಿಸಿ ಮಾತನಾಡಿದ ಶಾ ಮಮತಾ ಬಂಗಾಳದಲ್ಲಿ ಬಿಜೆಪಿಯ ಬೆಳವಣಿಗೆ ಕಂಡು ಕಂಗಾಲಾಗಿ ಹೋಗಿದ್ದಾರೆ. ಇದೇ ಕಾರಣಕ್ಕಾಗಿ ಬಿಜೆಪಿ ನಾಯಕರು ರಾಜ್ಯ ಪ್ರವೇಶಿಸದಂತೆ ತಡೆಯುತ್ತಿದ್ದಾರೆ ಎಂದರು. 

ನಮ್ಮ ಕಾಯಕರ್ತರು ಬಂಗಾಳದ 42 ಸ್ಥಾನಗಳ ಪೈಕಿ 23 ರಲ್ಲಿ ಕಮಲ ಅರಳಿಸದೆ ವಿರಮಿಸುವುದಿಲ್ಲ ಎನ್ನುವುದು ಅವರಿಗೆ ಗೊತ್ತಿಲ್ಲ ಎಂದರು. 

ಅಮಿತ್‌ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮತ್ತು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ, ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರ ಹೆಲಿಕಾಪ್ಟರ್‌ ಗೆ ಪಶ್ಚಿಮ ಬಂಗಾಲದಲ್ಲಿ ಇಳಿಯಲು ಅನುಮತಿ ನಿರಾಕರಿಸಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next