Advertisement

ಅಖಿಲ್ ಗಿರಿ ವಿವಾದ : ಕೊನೆಗೂ ಕ್ಷಮೆ ಯಾಚಿಸಿದ ಮಮತಾ ಬ್ಯಾನರ್ಜಿ

09:03 PM Nov 14, 2022 | Team Udayavani |

ಕೋಲ್ಕತಾ : ಸಚಿವ ಅಖಿಲ್ ಗಿರಿ ತಪ್ಪು ಮಾಡಿದ್ದಾರೆ. ನಾನು ಅವರ ಹೇಳಿಕೆಗಳನ್ನು ಖಂಡಿಸುತ್ತೇನೆ ಮತ್ತು ನನ್ನ ಪಕ್ಷದ ಪರವಾಗಿ ಕ್ಷಮೆಯಾಚಿಸುತ್ತೇನೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿಕೆ ನೀಡಿದ್ದಾರೆ.

Advertisement

ಅಖಿಲ್ ಗಿರಿ ಹೇಳಿಕೆ ಕುರಿತಾಗಿ ನನ್ನ ಪಕ್ಷ ಈಗಾಗಲೇ ಕ್ಷಮೆ ಕೇಳಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ನಾವು ನಮ್ಮ ಶಾಸಕರಿಗೆ ಎಚ್ಚರಿಕೆ ನೀಡಿದ್ದೇವೆ ಮತ್ತು ಭವಿಷ್ಯದಲ್ಲಿ ಅದು ಸಂಭವಿಸಿದರೆ ಪಕ್ಷವು ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

ಯಾರೋ ತಪ್ಪು ಮಾಡಿದ್ದಾರೆ ಮತ್ತು ನಾವು ಅದನ್ನು ವಿರೋಧಿಸುತ್ತೇವೆ, ನಾವು ಅದನ್ನು ಬೆಂಬಲಿಸುವುದಿಲ್ಲ. ಆದರೆ ಪ್ರತಿದಿನ ಹೇಳಿಕೆಗಳನ್ನು ನೀಡಲು ಬಳಸುತ್ತಿರುವ ಭಾಷೆ ಮತ್ತು ಮುಂದುವರಿದಿರುವ ಸುಳ್ಳು ಸ್ವೀಕಾರಾರ್ಹವಲ್ಲ ಎಂದು ಬ್ಯಾನರ್ಜಿ ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಕುರಿತು ರಾಜ್ಯ ಸಚಿವ ಅಖಿಲ್ ಗಿರಿ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸಿಎಂ ಈ ಹೇಳಿಕೆ ನೀಡಿದ್ದಾರೆ. ಬಿಜೆಪಿ ವ್ಯಾಪಕ ಆಕ್ರೋಶ ಹೊರ ಹಾಕಿ ಗಿರಿ ಯವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಪಟ್ಟು ಹಿಡಿದಿದೆ.

Advertisement

Udayavani is now on Telegram. Click here to join our channel and stay updated with the latest news.

Next