Advertisement

Udupi ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿಎಸ್ ನೇಮಕ

01:22 PM Aug 12, 2023 | Team Udayavani |

ಉಡುಪಿ: ಉಡುಪಿಯ ಅಪರ ಜಿಲ್ಲಾಧಿಕಾರಿಯಾಗಿದ್ದ ವೀಣಾ ಬಿ.ಎನ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ. ಇವರ ಜಾಗಕ್ಕೆ ಮಮತಾ ದೇವಿ ಜಿಎಸ್ ಅವರನ್ನು ನೇಮಕಗೊಳಿಸಲು ಆದೇಶದಲ್ಲಿ ತಿಳಿಸಲಾಗಿದೆ. ವೀಣಾ ಅವರಿಗೆ ಸ್ಥಳ ನಿಗದಿಯಾಗಿಲ್ಲ.

Advertisement

ಮಮತಾ ದೇವಿ ಜಿಎಸ್ ಅವರು ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಇದೇ ವೇಳೆ ಮಂಗಳೂರು ಮಹಾನಗರ ಪಾಲಿಕೆ ಕೌನ್ಸಿಲ್ ಕಾರ್ಯದರ್ಶಿಯಾಗಿದ್ದ ನವೀನ್ ಜೋಸೆಫ್ ಅವರನ್ನು ಬೆಂಗಳೂರು ಕಾಲೇಜು ಶಿಕ್ಷಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next