Advertisement

ನಾರದಾ ಕುಟುಕು ಕಾರ್ಯಾಚರಣೆ ಪ್ರಕರಣ : 25ರಿಂದ ಮಮತಾ ಅರ್ಜಿ ವಿಚಾರಣೆ

08:01 AM Jun 23, 2021 | Team Udayavani |

ಹೊಸದಿಲ್ಲಿ: ನಾರದಾ ಕುಟುಕು ಕಾರ್ಯಾಚರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಅಲ್ಲಿನ ಕಾನೂನು ಸಚಿವ ಮಲಯ್‌ ಘತಕ್‌ ಸಲ್ಲಿಸಿರುವ ಮೇಲ್ಮನವಿಯೊಂದರ ವಿಚಾರಣೆ ಯನ್ನು ಜೂ. 25ರಂದು ಆರಂಭಿಸಲು ಸುಪ್ರೀಂ ಕೋರ್ಟ್‌ ನಿರ್ಧರಿಸಿದೆ.

Advertisement

ಕಲ್ಕತ್ತಾ ಹೈಕೋರ್ಟ್‌ನಲ್ಲಿ ವಿಚಾರಣೆಯಲ್ಲಿರುವ ನಾರದಾ ಪ್ರಕರಣವನ್ನು ಬೇರೆಡೆ ವರ್ಗಾ ಯಿಸುವಂತೆ ಸಿಬಿಐ ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್‌ ಮಾನ್ಯ ಮಾಡಿತ್ತು.

ಈ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಹಾಗೂ ಮಲಯ್‌ ಸುಪ್ರೀಂ ಮೆಟ್ಟಿಲೇರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next