Advertisement

ಚಲಿಸುವ ರೈಲಿನಲ್ಲಿ ಮಾನಭಂಗ ಯತ್ನ: ಆರೋಪಿ ಪೊಲೀಸ್‌ ವಶಕ್ಕೆ

12:41 AM Oct 24, 2019 | mahesh |

ಕಡಬ: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿ, ಬೆಂಗಳೂರಿನ ಕೆಂಗೇರಿ ನಿವಾಸಿ ಮಂಜು (27) ಎಂಬಾತನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸುಬ್ರಹ್ಮಣ್ಯ ರೋಡ್‌ (ನೆಟ್ಟಣ) – ಮಂಗಳೂರು ರೈಲಿನಲ್ಲಿ ನೆಟ್ಟಣ – ಕೋಡಿಂಬಾಳ ನಡುವೆ ಬುಧವಾರ ಸಂಭವಿಸಿದೆ.

Advertisement

ನೆಟ್ಟಣದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲಿನ ಮಹಿಳಾ ಬೋಗಿಗೆ ಹತ್ತಿದ ಆರೋಪಿಯು, ಮಹಿಳೆ ಒಬ್ಬರೇ ಇದ್ದುದನ್ನು ಕಂಡು ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಹೆದರಿದ ಮಹಿಳೆಯು ಚೈನ್‌ ಎಳೆದು ರೈಲನ್ನು ನಿಲ್ಲಿಸಿದ್ದು, ಕೂಡಲೇ ಆರೋಪಿಯು ರೈಲಿನಿಂದ ಹಾರಿ ಪರಾರಿಯಾದ. ಬಳಿಕ ಆತನನ್ನು ಕೋಡಿಂಬಾಳದಲ್ಲಿ ಸಾರ್ವಜನಿಕರು ಹಿಡಿದು ಕಡಬ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇಬ್ಬರಿದ್ದರು?
ಈ ನಡುವೆ ಮಾನಭಂಗಕ್ಕೆ ಯತ್ನಿಸಿದ್ದ ವೇಳೆ ಇಬ್ಬರಿದ್ದು, ಓರ್ವ ಬಜಕೆರೆ ರೈಲು ನಿಲ್ದಾಣದಲ್ಲಿ ಇಳಿದು ನೆಟ್ಟಣ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾನೆ ಎಂಬ ವಿಚಾರ ಸಾರ್ವಜನಿಕ ವಲಯದಲ್ಲಿ ಹರಡಿತ್ತು. ಆ ವೇಳೆ ಮೂಜೂರು ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ನೇಪಾಲ ನಿವಾಸಿ ಬಬು ಎಂಬಾತನನ್ನು ಕೂಡ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಪೊಲೀಸರು ಆತನನ್ನು ವಿಚಾರಿಸಿದಾಗ, ತಾನು ಕೂಲಿ ಕಾರ್ಮಿಕನಾಗಿದ್ದು, ಘಟನೆಗೂ ತನಗೂ ಸಂಬಂಧವಿಲ್ಲ ಎಂದು ಆತ ತಿಳಿಸಿರುವುದಾಗಿ ತಿಳಿದು ಬಂದಿದೆ. ಆದರೆ ಹೆಚ್ಚಿನ ವಿಚಾರಣೆಗಾಗಿ ಇಬ್ಬರನ್ನೂ ಪೊಲೀಸರು ಪುತ್ತೂರು ರೈಲ್ವೇ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next