Advertisement

ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ರೈತ ಬಂಧನ

05:22 PM Jul 30, 2022 | Team Udayavani |

ಗುಂಡ್ಲುಪೇಟೆ (ಚಾಮರಾಜನಗರ): ಅಕ್ರಮವಾಗಿ ಜಮೀನಿನಲ್ಲಿ ಗಾಂಜಾ ಗಿಡ ಬೆಳೆದಿದ್ದ ಖಚಿತ ಮಾಹಿತಿ ಮೇರೆಗೆ ಬೇಗೂರು ಠಾಣೆ ಪೊಲೀಸರು ದಾಳಿ ನಡೆಸಿ ಗಾಂಜಾ ಗಿಡ ವಶಕ್ಕೆ ಪಡೆದು, ಜಮೀನು ಮಾಲೀಕನನ್ನು ಬಂಧಿಸಿರುವ ಘಟನೆ ತಾಲೂಕಿನ ಸೋಮಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ಸೋಮಹಳ್ಳಿ ಗ್ರಾಮದ ವೀರಪ್ಪ ಬಂಧಿತ ಆರೋಪಿ. ಈತ ತನ್ನ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿದ್ದ ಮಾಹಿತಿ ಮೇರೆಗೆ ಡಿವೈಎಸ್‍ಪಿ ಪ್ರಿಯದರ್ಶಿ ಸಾಣೆಕೊಪ್ಪ ಮಾರ್ಗದರ್ಶನ ಬೇಗೂರು ಠಾಣೆಯ ಸಿಪಿಐ ಕಿರಣ್‍ಕುಮಾರ್ ನೇತೃತ್ವದಲ್ಲಿ ಪಿಎಸ್‍ಐ ಜಗದೀಶ್ ಧೂಳಶೆಟ್ಟಿ ಮತ್ತು ತಂಡದವರು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ 3 ಕೆ.ಜಿ 32 ಗ್ರಾಂ ಹಸಿ ಗಾಂಜಾ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಎಚ್.ಸಿ. ಪ್ರದೀಪ್, ಮಹಾದೇವಸ್ವಾಮಿ, ಮಣಿ, ಸ್ವಾಮಿ, ಸುರೇಶ್, ಮಧು, ನಾಗೇಂದ್ರ ಇತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next