Advertisement

G20 ಶೃಂಗಸಭೆ; ಸ್ಫೋಟ ಬೆದರಿಕೆ ಹಾಕಿದ ವ್ಯಕ್ತಿ ಪೊಲೀಸರ ಅತಿಥಿ

08:37 PM Sep 08, 2023 | Team Udayavani |

ಹೊಸದಿಲ್ಲಿ: ಸಾಮಾಜಿಕ ಮಾಧ್ಯಮದಲ್ಲಿ ಜಿ 20 ಶೃಂಗಸಭೆಯಲ್ಲಿ ದಾಳಿ ನಡೆಸುವುದಾಗಿ ಹೇಳಿಕೊಂಡ ಆರೋಪದ ಮೇಲೆ ಉತ್ತರ ದೆಹಲಿಯ ಭಾಲ್ಸ್ವಾ ಡೈರಿ ಪ್ರದೇಶದ ವ್ಯಕ್ತಿಯನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಜಿ 20 ಶೃಂಗಸಭೆ ನಡೆಯುತ್ತಿರುವ ಪ್ರಗತಿ ಮೈದಾನದ ಕಡೆಗೆ ಬಂದೂಕುಗಳು ಮತ್ತು ಸ್ಫೋಟಕಗಳನ್ನು ಹೊತ್ತ ಆಟೋ ರಿಕ್ಷಾ ಬರುತ್ತಿದೆ ಎಂದು ಆರೋಪಿ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೊಂಡಿದ್ದ.

ಕ್ಷಿಪ್ರ ಕ್ರಮ ಕೈಗೊಂಡಿರುವ ಭಾಲ್ಸ್ವ ಡೈರಿ ಪೊಲೀಸ್ ತಂಡ ಆರೋಪಿಯನ್ನು ಪತ್ತೆ ಹಚ್ಚಿ ಸಾರ್ವಜನಿಕವಾಗಿ ಸುಳ್ಳು ಮಾಹಿತಿ ಹಬ್ಬಿಸಿದ್ದಕ್ಕಾಗಿ ಬಂಧಿಸಿದ್ದಾರೆ. ದೆಹಲಿಯಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಿ ಹದ್ದಿನ ಕಣ್ಣು ಇಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next