Advertisement

ಪತ್ನಿ ವಿರಹದಿಂದ ನೊಂದು ಆತ್ಮಹತ್ಯೆ! ಚಾರ್ಮಾಡಿ ಘಾಟಿಯಲ್ಲಿ ಕಾರಿನಲ್ಲಿ ವಿಷ ಸೇವಿಸಿ ಸಾವು!

03:23 PM Aug 20, 2020 | keerthan |

ಮೂಡಿಗೆರೆ ( ಚಿಕ್ಕಮಗಳೂರು): ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಕಿಗೆ ಬಂದಿದೆ.

Advertisement

ಚಿಕ್ಕಮಗಳೂರು ಜಿಲ್ಲೆಯ ಮಲಯ ಮಾರುತ ಬಳಿ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದರು. ಕಾರಿನಲ್ಲಿ ದೊರೆತ ದಾಖಲೆಗಳ ಪ್ರಕಾರ ಮೃತಪಟ್ಟ ವ್ಯಕ್ತಿಯನ್ನು 44 ವರ್ಷದ ನಾಗರಾಜು ಎಂದು ಗುರುತಿಸಲಾಗಿದೆ. ಈತ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಹೊರಕೆರೆ ದೇವಪುರ ಗ್ರಾಮದವರು ಎನ್ನಲಾಗಿದೆ.

ಮಂಗಳವಾರ ಸಂಜೆಯಿಂದ ಕಾರು ಇಲ್ಲಿದ್ದು, ಬುಧವಾರ ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಕಾರಿನ ಪಕ್ಕ ವಿಷದ ಬಾಟಲಿ ಪತ್ತೆಯಾಗಿದ್ದು, ಡ್ರೈವಿಂಗ್ ಸೀಟಿನಲ್ಲಿ ಕುಳಿತು ವಿಷ ಸೇವಿಸರಬಹುದು ಎಂದು ಅಂದಾಜಿಸಲಾಗಿದೆ.

ಡೆತ್ ನೋಟ್ ಪತ್ತೆ: ಕಾರಿನಲ್ಲಿ ನಾಗರಾಜು ಬರೆದಿದ್ದಾನೆ ಎನ್ನಲಾದ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಗಿರೀಶ್ ಎಂಬಾತ ನನಗೆ 26 ಸಾವಿರ ರೂಪಾಯಿ ಹಣ ನೀಡಬೇಕಿದ್ದು, ನನ್ನ ಬೈಕ್ ಕೂಡಾ ಆತನಿಗೆ ಕೊಟ್ಟಿದ್ದೇನೆ ಎಂದು ಬರೆದಿದ್ದಾರೆ.

Advertisement

ಅಗಲಿದ ಪತ್ನಿಯ ನೆನಪು: ನಾಗರಾಜು ಅವರ ಪತ್ನಿ 20 ದಿನಗಳ ಹಿಂದೆ ಸಾವನ್ನಪ್ಪಿದ್ದರು ಎನ್ನಲಾಗಿದೆ. “ ಪತ್ನಿಯನ್ನು ಕಳೆದುಕೊಂಡ ಮೇಲೆ ನನಗೆ ಜೀವನ ಬೇಸರವಾಗಿದೆ. ಅವಳನ್ನು ಬಿಟ್ಟು ನನಗೆ ಜೀವನವೇ ಇಲ್ಲ. ಹಾಗಾಗಿ ಅವಳ ದಾರಿಗೆ ನಾನು ಸಾಗುವೆ” ಎಂದು ಡೆತ್ ನೋಟ್ ನಲ್ಲಿ ಬರೆದುಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next