Advertisement

ಪತ್ರಿಕಾಗೋಷ್ಠಿಯಲ್ಲೇ ವಿಷ ಸೇವಿಸಿದ ವ್ಯಕ್ತಿ! 

10:20 AM Mar 21, 2018 | Karthik A |

ಕಲಬುರಗಿ: ಪತ್ರಿಕಾಗೋಷ್ಠಿ ಮಾಡಿ ತನ್ನ ನೋವು ತೋಡಿಕೊಳ್ಳಲು ಆಗಮಿಸಿದ್ದ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಭಾವುಕನಾಗಿ ಪತ್ರಕರ್ತರ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಗರದ ಜಿ.ಪಂ. ಆವರಣದಲ್ಲಿರುವ ಪತ್ರಿಕಾ ಭವನದಲ್ಲಿ ನಡೆದಿದೆ. 

Advertisement

ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದ ಶರಣಬಸಪ್ಪ ಲಾಡಪ್ಪ ಮಾನೆ ಅವರು ತಮ್ಮ ಪತ್ನಿ ಸುವರ್ಣಾ ಅವರೊಂದಿಗೆ ಜೀವಿಸಲು ಸಾಧ್ಯವಾಗುವುದಿಲ್ಲ, ಅದಕ್ಕಾಗಿ ವಿವಾಹ ವಿಚ್ಛೇದನ ನೀಡುವಂತೆ ಪ್ರಕರಣ ದಾಖಲಿಸಿದ್ದರು. ಆದರೆ ಪ್ರಕರಣ ಇತ್ಯರ್ಥಪಡಿಸುವಲ್ಲಿ ಆಗಿರುವ ವಿಳಂಬ ನೀತಿಯಿಂದ ಮಾನಸಿಕವಾಗಿ ನೊಂದಿದ್ದ ಅವರು, ಮಂಗಳವಾರ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವೇಳೆ ಏಕಾಏಕಿಯಾಗಿ ಆತ್ಮಹತ್ಯೆಗೆ ಯತ್ನಿಸಿದರು. ಕೂಡಲೇ ಅವರನ್ನು  ಪತ್ರಕರ್ತರು 108 ಅಂಬ್ಯುಲೆನ್ಸ್‌ ಕರೆಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next