Advertisement

ಪತ್ನಿಯನ್ನು ಕೊಂದು ಕಿವಿ ಕತ್ತರಿಸಿ ಕಿಸೆಯಲ್ಲಿಟ್ಟುಕೊಂಡ !

11:27 AM Feb 27, 2018 | Team Udayavani |

ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬ ಶೀಲ ಶಂಕಿಸಿ ಪತ್ನಿಯನ್ನು ಕೊಂದು ಬೆಂಕಿ ಹಚ್ಚಿ ಕ್ರೌರ್ಯ ಮೆರೆದ ಘಟನೆ ಶಿಡ್ಲಘಟ್ಟದ ದಾಸೇನಹಳ್ಳಿ ಹೊರವಲಯದ ನೀಲಗಿರಿ ತೋಪಿನಲ್ಲಿ ನಡೆದಿದೆ.

Advertisement

ವೆಂಕಟಲಕ್ಷ್ಮಮ್ಮ (28) ಎಂಬಾಕೆಯನ್ನು ಪತಿ  ಆದಿನಾರಾಯಣ ಬರ್ಬರವಾಗಿ ಕೊಂದು ಬೆಂಕಿ ಹಚ್ಚಿದ್ದಾನೆ. ಬಳಿಕ ವಿಕೃತನಂತೆ ಕಿವಿಗಳನ್ನು ಕತ್ತರಿಸಿಕೊಂಡು ಜೇಬಿನಲ್ಲಿಟ್ಟುಕೊಂಡಿದ್ದಾನೆ. 

ದಂಪತಿಗೆ ಇಬ್ಬರು ಮಕ್ಕಳೂ ಇದ್ದಾರೆ ಎಂದು ತಿಳಿದು ಬಂದಿದ್ದು, ನಿರಂತರ ಜಗಳವಾಡುತ್ತಿದ್ದರು ಎಂದು ಹೇಳಲಾಗಿದೆ. 

ಆದಿ ನಾರಾಯಣ ನಿತ್ಯವೂ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಎಂದು ಹೇಳಲಾಗಿದೆ. 

 ಶಿಡ್ಲಘಟ್ಟ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಆದಿ ನಾರಾಯಣನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next