Advertisement

Tragedy: ಗಣೇಶ ಹಬ್ಬದ ಸಂಭ್ರಮಲ್ಲಿದ್ದ ಯುವಕನಿಗೆ ನೃತ್ಯ ಮಾಡುವಾಗಲೇ ಹೃದಯಾಘಾತ… ವಿಡಿಯೋ

01:05 PM Sep 21, 2023 | Team Udayavani |

ಆಂಧ್ರಪ್ರದೇಶ: ಗಣೇಶ ಹಬ್ಬದ ಸಂಭ್ರಮದಲ್ಲಿದ್ದ ಯುವಕನೊಬ್ಬ ಗಣೇಶ ಮೂರ್ತಿ ಪೆಂಡಾಲ್ ಬಳಿ ನೃತ್ಯ ಮಾಡುವ ವೇಳೆ ಹೃದಯಾಘಾತಗೊಂಡು ಮೃತಪಟ್ಟಿರುವ ಆಘಾತಕಾರಿ ಘಟನೆಯೊಂದು ನಡೆದಿದೆ.

Advertisement

ಮೃತಪಟ್ಟ ಯುವಕನನ್ನು ಪ್ರಸಾದ್(26) ಎನ್ನಲಾಗಿದೆ.

ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಧರ್ಮವರಂನಲ್ಲಿ ಈ ದಾರುಣ ಘಟನೆ ನಡೆದಿದ್ದು, ಬುಧವಾರ ರಾತ್ರಿ ಗಣೇಶ ಮಂಟಪದಲ್ಲಿ ಪ್ರಸಾದ್ ಎಂಬ ಯುವಕ ಇತರ ಯುವಕರ ಜೊತೆ ಉತ್ಸಾಹದಿಂದ ಕುಣಿಯುತ್ತಿದ್ದ ಈ ವೇಳೆ ಯುವಕನಿಗೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾನೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ. ಆಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ತೆಲಂಗಾಣದಲ್ಲೂ ಹೃದಯಾಘಾತ ಪ್ರಕರಣ:
ಇತ್ತೀಚೆಗೆ ಖಮ್ಮಂ ಜಿಲ್ಲೆಯಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದ. 14 ವರ್ಷದ ವಿದ್ಯಾರ್ಥಿಯೊಬ್ಬ ಸ್ಥಳೀಯ ಸರಕಾರಿ ಪ್ರೌಢಶಾಲೆಯಲ್ಲಿ ತರಗತಿಗೆ ಹಾಜರಾಗುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದೆ. ಶಾಲೆಯ ಶಿಕ್ಷಕರು ಆತನನ್ನು ಆಸ್ಪತ್ರೆಗೆ ಸಾಗಿಸಿದರಾದರೂ ಮಾರ್ಗಮಧ್ಯೆ ಬಾಲಕ ಮೃತಪಟ್ಟಿದ್ದಾನೆ. ಪರೀಕ್ಷಿಸಿದ ವೈದ್ಯರು ಬಾಲಕ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಇದನ್ನೂ ಓದಿ: Canada: ಕೆನಡಾದಲ್ಲಿ ಖಲಿಸ್ತಾನಿ ಭಯೋತ್ಪಾದಕನ ಹತ್ಯೆ… ಹೊಣೆ ಹೊತ್ತ ಲಾರೆನ್ಸ್ ಬಿಷ್ಣೋಯ್

Advertisement

Advertisement

Udayavani is now on Telegram. Click here to join our channel and stay updated with the latest news.

Next