Advertisement

Kasaragod ತಾಯಿ, ಪತ್ನಿಯ ಕೊಲೆಗೈದು ವ್ಯಕ್ತಿ ಆತ್ಮಹತ್ಯೆ

11:49 PM Feb 18, 2024 | Team Udayavani |

ಕಾಸರಗೋಡು: ತಾಯಿ ಹಾಗೂ ಪತ್ನಿಯನ್ನು ಕೇಬಲ್‌ನಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆಗೈದು ಮಧ್ಯವಯಸ್ಕ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಂಞಂಗಾಡ್‌ನ‌ ಮುತ್ತಪ್ಪನ್‌ ಕ್ಷೇತ್ರ ಸಮೀಪದ ಹಬೀಬ್‌ ಕ್ವಾರ್ಟರ್ಸ್‌ನಲ್ಲಿ ನಡೆದಿದೆ.

Advertisement

ಕಾಂಞಂಗಾಡ್‌ ಬಸ್‌ ನಿಲ್ದಾಣ ಪರಿಸರದಲ್ಲಿ ವಾಚ್‌ ವರ್ಕ್ಸ್ ಅಂಗಡಿ ನಡೆಸುತ್ತಿದ್ದ ಸೂರ್ಯಪ್ರಕಾಶ್‌ (55), ಪತ್ನಿ ಗೀತಾ (48) ಮತ್ತು ತಾಯಿ ಲೀಲಾ (93) ಅವರ ಮೃತದೇಹ ಮನೆಯೊಳಗೆ ಪತ್ತೆಯಾಗಿದೆ. ಕ್ವಾರ್ಟರ್ಸ್‌ನ ಎರಡು ಕೊಠಡಿಯಲ್ಲಿ ಲೀಲಾ ಹಾಗೂ ಗೀತಾ ಅವರ ಮೃತದೇಹ ಮಲಗಿದ ಸ್ಥಿತಿಯಲ್ಲಿ ಕಂಡು ಬಂದಿದೆ. ಸೂರ್ಯಪ್ರಕಾಶ್‌ ಅವರ ಮೃತದೇಹ ಅಡುಗೆ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿತ್ತು. ಆರ್ಥಿಕ ಹೊರೆ ಘಟನೆಗೆ ಕಾರಣವೆನ್ನಲಾಗಿದೆ.

ಸೂರ್ಯಪ್ರಕಾಶ್‌ ಬರೆದಿಟ್ಟಿದ್ದೆನ್ನಲಾದ ಪತ್ರವೊಂದು ಮನೆಯಲ್ಲಿ ಲಭಿಸಿದ್ದು, ಆರ್ಥಿಕ ಸ್ಥಿತಿ ಹದಗೆಟ್ಟ ಬಗ್ಗೆ ಇದರಲ್ಲಿ ಉಲ್ಲೇಖೀಸಲಾಗಿದೆ. ಕುತ್ತಿಗೆ ಬಿಗಿದ ಕೇಬಲ್‌ ಸ್ಥಳದಲ್ಲಿ ಪತ್ತೆಹಚ್ಚಲಾಗಿದೆ. ದಂಪತಿಗೆ ಮೂವರು ಮಕ್ಕಳಿದ್ದು, ಇಬ್ಬರು ಹೆಣ್ಣು ಮಕ್ಕಳನ್ನು ವಿವಾಹ ಮಾಡಿಕೊಡಲಾಗಿದೆ. ಪುತ್ರ ಅಜಯ್‌ ಉದ್ಯೋಗ ನಿಮಿತ್ತ ಎರ್ನಾಕುಳಂನಲ್ಲಿ ವಾಸವಾಗಿದ್ದಾರೆ.

ಪುತ್ರನಿಗೆ ಕೊನೆಯ ಕರೆ
ಎರ್ನಾಕುಳಂನಲ್ಲಿರುವ ಪುತ್ರ ಅಜಯ್‌ ಅವರಿಗೆ ಫೋನ್‌ ಮಾಡಿ “ಅಜ್ಜಿಹಾಗೂ ತಾಯಿ ನಮ್ಮನ್ನು ಬಿಟ್ಟು ತೆರಳಿದ್ದು, ನಾನೂ ಅವರ ದಾರಿಯಲ್ಲಿ ಸಾಗುತ್ತೇನೆ’ ಎಂದು ಸಾವಿಗೆ ಮುನ್ನಕರೆ ಮಾಡಿ ತಿಳಿಸಿದ್ದರು. ಇದರಿಂದ ಗಾಬರಿಗೊಂಡ ಅಜಯ್‌ ನೆರೆಮನೆಯ ಗೆಳೆಯನಿಗೆ ಫೋನ್‌ ಮಾಡಿ ನೋಡಲು ತಿಳಿಸಿದ್ದಾರೆ. ಇದರಂತೆ ಗೆಳೆಯ ಹೋಗಿ ನೋಡಿದಾಗ ಮೂವರ ಮೃತದೇಹ ಕಂಡು ಬಂದಿದೆ. ಇದರಿಂದ ಘಟನೆ ಬಯಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next