Advertisement
ಕಾಂಞಂಗಾಡ್ ಬಸ್ ನಿಲ್ದಾಣ ಪರಿಸರದಲ್ಲಿ ವಾಚ್ ವರ್ಕ್ಸ್ ಅಂಗಡಿ ನಡೆಸುತ್ತಿದ್ದ ಸೂರ್ಯಪ್ರಕಾಶ್ (55), ಪತ್ನಿ ಗೀತಾ (48) ಮತ್ತು ತಾಯಿ ಲೀಲಾ (93) ಅವರ ಮೃತದೇಹ ಮನೆಯೊಳಗೆ ಪತ್ತೆಯಾಗಿದೆ. ಕ್ವಾರ್ಟರ್ಸ್ನ ಎರಡು ಕೊಠಡಿಯಲ್ಲಿ ಲೀಲಾ ಹಾಗೂ ಗೀತಾ ಅವರ ಮೃತದೇಹ ಮಲಗಿದ ಸ್ಥಿತಿಯಲ್ಲಿ ಕಂಡು ಬಂದಿದೆ. ಸೂರ್ಯಪ್ರಕಾಶ್ ಅವರ ಮೃತದೇಹ ಅಡುಗೆ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿತ್ತು. ಆರ್ಥಿಕ ಹೊರೆ ಘಟನೆಗೆ ಕಾರಣವೆನ್ನಲಾಗಿದೆ.
ಎರ್ನಾಕುಳಂನಲ್ಲಿರುವ ಪುತ್ರ ಅಜಯ್ ಅವರಿಗೆ ಫೋನ್ ಮಾಡಿ “ಅಜ್ಜಿಹಾಗೂ ತಾಯಿ ನಮ್ಮನ್ನು ಬಿಟ್ಟು ತೆರಳಿದ್ದು, ನಾನೂ ಅವರ ದಾರಿಯಲ್ಲಿ ಸಾಗುತ್ತೇನೆ’ ಎಂದು ಸಾವಿಗೆ ಮುನ್ನಕರೆ ಮಾಡಿ ತಿಳಿಸಿದ್ದರು. ಇದರಿಂದ ಗಾಬರಿಗೊಂಡ ಅಜಯ್ ನೆರೆಮನೆಯ ಗೆಳೆಯನಿಗೆ ಫೋನ್ ಮಾಡಿ ನೋಡಲು ತಿಳಿಸಿದ್ದಾರೆ. ಇದರಂತೆ ಗೆಳೆಯ ಹೋಗಿ ನೋಡಿದಾಗ ಮೂವರ ಮೃತದೇಹ ಕಂಡು ಬಂದಿದೆ. ಇದರಿಂದ ಘಟನೆ ಬಯಲಾಯಿತು.