Advertisement

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

09:56 PM May 21, 2024 | Team Udayavani |

ಕಡಬ:ಸಾಲದ ಬಾಧೆಯಿಂದ ವ್ಯಕ್ತಿಯೊಬ್ಬರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳದಲ್ಲಿ ನಡೆದಿದೆ.

Advertisement

ಕೋಡಿಂಬಾಳ ಗ್ರಾಮದ ಅರ್ಪಾಜೆ ನಿವಾಸಿ ದಯಾನಂದ ರೈ( 55 ) ಆತ್ಮಹತ್ಯೆ ಮಾಡಿಕೊಂಡವರು.

ಮೃತರ ಪತ್ನಿ ಕೆಲಸಕ್ಕೆ ಹೋಗಿ ಸಂಜೆ ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಪತಿ ಕಾಣೆಯಾಗಿದ್ದರು. ಸುತ್ತಮುತ್ತ ಹುಡುಕಾಡಿ .ಮನೆಯ ಒಳಗಡೆ ನೋಡಿದಾಗ ಮನೆಯ ಒಳಗೆ ಮರದ ಅಡ್ಡಕ್ಕೆ ಪ್ಲಾಸ್ಟಿಕ್‌ ಹಗ್ಗದಿಂದ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. ಮೃತ ದಯಾನಂದ ರೈ ರವರು ಹಣದ ಸಮಸ್ಯೆ ಹಾಗೂ ಸಾಲವನ್ನು ಕಟ್ಟಲಾಗದೆ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಮೃತರ ಪತ್ನಿ ವಾರಿಜ ಅವರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next