Advertisement

Kadri Temple; ಅಣ್ಣಪ್ಪ ದೈವದ ಕಡ್ಸಲೆ ಹಿಡಿದು ಯುವಕನ ಹುಚ್ಚಾಟ; ಅರ್ಚಕರ ಮೇಲೂ ಹಲ್ಲೆ

04:42 PM Jul 09, 2024 | Team Udayavani |

ಮಂಗಳೂರು: ಜಿಲ್ಲೆಯ ಪ್ರಮುಖ ದೇವಸ್ಥಾನವಾದ, ನಗರದ ಕದ್ರಿ ಶ್ರೀಮಂಜುನಾಥ ದೇವಾಲಯದಲ್ಲಿ ಯುವಕನೊಬ್ಬ ಅತಿರೇಕದಿಂದ ವರ್ತಿಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಅಲ್ಲದೆ ಅಣ್ಣಪ್ಪ ದೈವದ ಕಡ್ಸಲೆ ಹಿಡಿದು ದಾಂಧಲೆ ನಡೆಸಿದ್ದಾನೆ.

Advertisement

ಕದ್ರಿ ದೇವಸ್ಥಾನದ ಪ್ರಾಂಗಣಕ್ಕೆ ಬೈಕ್ ನಲ್ಲಿ ನೇರವಾಗಿ ಬಂದ ಯುವಕ ಬಳಿಕ ದೇವಸ್ಥಾನಕ್ಕೆ ನುಗ್ಗಿ ರಂಪಾಟ ನಡೆಸಿದ್ದಾನೆ. ಅಣ್ಣಪ್ಪ ಸ್ವಾಮಿಯ ಗುಡಿಯ ಮುಂಭಾಗಕ್ಕೆ ತೆರಳಿ ಕಾಲಿನಿಂದ ಬಾಗಿಲು ಒದ್ದ ಯುವಕ, ಅಣ್ಣಪ್ಪ ದೈವದ ಕಡ್ಸಲೆಯನ್ನು ಕೈಗೆತ್ತಿಕೊಂಡು ಹುಚ್ಚಾಟ ಮೆರೆದಿದ್ದಾನೆ. ಮಧ್ಯೆ ಪ್ರವೇಶಿಸಿದ ಅರ್ಚಕರ ಮೇಲೂ ಹಲ್ಲೆಗೆ ಯತ್ನಿಸಿದ್ದಾನೆ ಎಂದು ವರದಿಯಾಗಿದೆ.

ಸ್ಥಳದಲ್ಲಿದ್ದವರು ಯುವಕನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ‌. ಯುವಕನನ್ನು ತಮ್ಮ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈತ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ‌ ಕಾರ್ಯನಿರ್ವಹಿಸುತ್ತಿದ್ದಾನೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next