Advertisement

ಉದ್ಯಾವರ: ಕಪ್ಪೆಚಿಪ್ಪು ಹಿಡಿಯಲು ಹೋದ ವ್ಯಕ್ತಿ ಆಕಸ್ಮಿಕವಾಗಿ ಹೊಳೆಯಲ್ಲಿ ಮುಳುಗಿ ಸಾವು

09:01 PM Jan 29, 2021 | Team Udayavani |

ಕಟಪಾಡಿ: ಉದ್ಯಾವರ ಪಾಪನಾಶಿನಿ ಹೊಳೆಯಲ್ಲಿ ಕಪ್ಪೆಚಿಪ್ಪು ಹಿಡಿಯುವ ಸಮಯ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

Advertisement

ಆಸ್ಟೀನ್ ಮಚಾದೋ (41) ಎಂಬವರು ಸಾವಿಗೀಡಾದ ವ್ಯಕ್ತಿಯಾಗಿದ್ದಾರೆ.

ನಾಟಕ, ಚಿತ್ರ ಕಲಾವಿದರಾಗಿದ್ದ ಮಚಾದೋ ಪೈಂಟಿಂಗ್ ವ್ರತ್ತಿ ಮಾಡಿಕೊಂಡಿದ್ದು, ಕಪ್ಪೆಚಿಪ್ಪು ಹಿಡಿಯಲೆಂದು ಜ.28ರಂದು ಮನೆಯಿಂದ ಉದ್ಯಾವರ ಗ್ರಾಮದ ಪಾಪನಾಶಿನಿ ಹೊಳೆಗೆ ಹೋಗಿದ್ದರು.

ತನ್ನ ಸ್ಕೂಟರನ್ನು ಹೊಳೆ ಬದಿಯಲ್ಲಿ ನಿಲ್ಲಿಸಿ ಹೊಳೆಗೆ ಇಳಿದಿದ್ದು, ವಾಪಾಸು ಮನೆಗೆ ಬಾರದೇ ಇದ್ದ ವೇಳೆ ಮನೆಯವರು ಹುಡುಕಾಟ ನಡೆಸಿದ್ದಾರೆ , ಹೊಳೆಯ ಸುತ್ತಮುತ್ತ ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ, ಆದರೆ ಜ. 29 ರಂದು ಉದ್ಯಾವರ ಗ್ರಾಮದ ಸಂಪಿಗೆನಗರ ಬಬ್ಬರ್ಯಗುಡ್ಡೆಯ ಪಾಪನಾಶಿನಿ ಹೊಳೆಯಲ್ಲಿ ಆಸ್ಟೀನ್ ಮಚಾದೋ ಮೃತದೇಹ ಪತ್ತೆಯಾಗಿದೆ.

Advertisement

ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಟಪಾಡಿ ಹೊರಠಾಣೆ ಪೊಲೀಸ್ ರು ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next