Advertisement

ವಿಟ್ಲ: ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿ ಸಾವು

09:54 PM Jun 07, 2024 | Team Udayavani |

ವಿಟ್ಲ: ಕನ್ಯಾನ ಗ್ರಾಮದ ಪರಕ್ಕಜೆಯಲ್ಲಿ ತೋಟಕ್ಕೆ ಹೋಗಿದ್ದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ತೋಟದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಜೂ. 6ರ ರಾತ್ರಿ 10ರ ಸುಮಾರಿಗೆ ಸಂಭವಿಸಿದೆ.

Advertisement

ಪರಕಜೆ ನಿವಾಸಿ ಬಾಲಕೃಷ್ಣ ಭಂಡಾರಿ (56) ಮೃತರು. ಅವರು ಜೂ. 6ರ ಅಪರಾಹ್ನ 3ರ ಸುಮಾರಿಗೆ ತೋಟಕ್ಕೆ ಹೋಗಿದ್ದು, ರಾತ್ರಿ 10 ಗಂಟೆ ಕಳೆದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ ಹುಡುಕಾಡಿದಾಗ ಅವರ ಮೃತದೇಹ ತೋಟದ ಕೆರೆಯಲ್ಲಿ ಪತ್ತೆಯಾಗಿದೆ.

ಅವರು ಸುಮಾರು 10 ಅಡಿ ಆಳದ ಕೆರೆಗೆ ಇಳಿಯಲು ಮಾಡಿದ ಮೆಟ್ಟಿಲಿನಿಂದ ಕಾಲು ಜಾರಿ ನೀರಿಗೆ ಬಿದ್ದು ಉಸಿರುಗಟ್ಟಿ ಮೃತಪಟ್ಟಿದ್ದಾಗಿ ಅವರ ಅಣ್ಣನ ಪುತ್ರ ಅಶೋಕ್‌ ಪಿ. ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next