Advertisement

Bantwal ವಿಷ ಜಂತು ಕಡಿದು ವ್ಯಕ್ತಿ ಸಾವು

11:10 PM Feb 02, 2024 | Team Udayavani |

ಬಂಟ್ವಾಳ: ಸಜೀಪಮೂಡ ಗ್ರಾಮದ ನಗ್ರಿಯಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ವಿಷ ಜಂತು ಕಡಿದು ಗಾಯಗೊಂಡು ದೇರಳಕಟ್ಟೆ ಖಾಸಗಿ ದಾಖಲಾಗಿದ್ದರು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜ. 28ರಂದು ನಡೆದಿದೆ.

Advertisement

ನಗ್ರಿ ನಿವಾಸಿ ಅಂದ್ರು ಡಿ’ಸೋಜಾ (60) ಅವರು ಜ. 27ರಂದು ಬೆಳಗ್ಗೆ 9ರ ಸುಮಾರಿಗೆ ಕೆಲಸ ಮಾಡುತ್ತಿದ್ದ ವೇಳೆ ಯಾವುದೋ ವಿಷಜಂತು ಕಡಿದಿದೆ. ಪ್ರಾರಂಭದಲ್ಲಿ ಅದಕ್ಕೆ ಹಳ್ಳಿ ಮದ್ದು ಮಾಡಲಾಗಿದ್ದು, ಅದು ಗುಣವಾಗದೆ ಉಲ್ಬಣಗೊಂಡಿತ್ತು.

ಹೀಗಾಗಿ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next