Advertisement

ಕಾರಿಗೆ ಹಠಾತ್‌ ಬೆಂಕಿ, ವ್ಯಕ್ತಿ ಸಜೀವ ದಹನ

06:25 AM Aug 14, 2017 | |

ಕೊಯಂಬತ್ತೂರು: ಹೊತ್ತಿ ಉರಿಯುತ್ತಿದ್ದ ಕಾರಿನಿಂದ ಮಡದಿ ಮತ್ತು ತನ್ನಿಬ್ಬರು ಮಕ್ಕಳನ್ನು ಹೊರಗೆ ತಳ್ಳಿ ರಕ್ಷಿಸಿದ ವ್ಯಕ್ತಿಯೊಬ್ಬರು ಅದೇ ಬೆಂಕಿಯ ಕೆನ್ನಾಲಿಗೆಗೆ ಬಲಿಯಾದ ಹೃದಯ ವಿದ್ರಾವಕ ಘಟನೆ ತಮಿಳುನಾಡಿನ ಕೊಯಂಬತ್ತೂರು ಬಳಿ ಭಾನುವಾರ ಬೆಳಗ್ಗೆ ನಡೆದಿದೆ.

Advertisement

ಬೆಂಗಳೂರು ಮೂಲದ ಆಭರಣ ಉದ್ಯಮಿ ದಿಲೀಪ್‌ ಕುಮಾರ್‌ (38) ಮೃತರು. ದಿಲೀಪ್‌ ತಮ್ಮ ಕುಟುಂಬದೊಂದಿಗೆ ಕಾರಿನಲ್ಲಿ ಬೆಂಗಳೂರಿನಿಂದ ಕೊಯಂಬತ್ತೂರು ಮಾರ್ಗವಾಗಿ ಕೊಚ್ಚಿಗೆ ತೆರಳುತ್ತಿದ್ದರು. ಭಾನುವಾರ ಬೆಳಗ್ಗೆ ಮಡುಕ್ಕುರೈ ಟೋಲ್‌ಗೇಟ್‌ ಬಳಿಗೆ ಬರುತ್ತಲೇ ಅವರ ಕಾರಿನ ಎಂಜಿನ್‌ನಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತುಕೊಂಡ ದಿಲೀಪ್‌ ತಮ್ಮ ಪತ್ನಿ ಮತ್ತು ಮಕ್ಕಳನ್ನು ಕಾರಿನಿಂದ ಹೊರಗೆ ತಳ್ಳುವಲ್ಲಿ ಸಫ‌ಲರಾಗಿದ್ದಾರೆ. ಆದರೆ, ಕುಟುಂಬದವರನ್ನೆಲ್ಲ ಕಾರಿನಿಂದ ಕಳಗಿಳಿಸಿದ ದಿಲೀಪ್‌ ತಮ್ಮ ಸೀಟ್‌ ಬೆಲ್ಟ್ ಅನ್ನು ಬಿಚ್ಚುವಲ್ಲಿ ವಿಫ‌ಲರಾಗಿದ್ದಾರೆ. ಅಷ್ಟೊತ್ತಿಗಾಗಲೇ ಬೆಂಕಿ ಇಡೀ ಕಾರನ್ನು ಆವರಿಸಿಕೊಂಡಿತ್ತು. ಹೀಗಾಗಿ ಪತ್ನಿ ಮತ್ತು ಮಕ್ಕಳ ಕಣ್ಣೆದುರೇ ದಿಲೀಪ್‌ ದುರ್ಮರಣಕ್ಕೀಡಾದರು. ಘಟನೆಯ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next