Advertisement

Kundapura ಕುಸಿದು ಬಿದ್ದು ವ್ಯಕ್ತಿ ಸಾವು

11:14 PM Jul 07, 2024 | Team Udayavani |

ಕುಂದಾಪುರ: ಬಸ್ರೂರು ಗ್ರಾಮದ ನಿವಾಸಿ ರತ್ನಾಕರ (35) ಅವರು ಇಲ್ಲಿನ ಶಾಸ್ತ್ರಿ ಸರ್ಕಲ್‌ ಬಳಿ ಅಸ್ವಸ್ಥಗೊಂಡು, ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಜು. 6ರಂದು ಸಂಭವಿಸಿದೆ.

Advertisement

ಕುಸಿದು ಬಿದ್ದ ಅವರನ್ನು ಕೂಡಲೇ ಕುಂದಾಪುರದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ರತ್ನಾಕರ ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಇವರು ಲೋ ಬಿಪಿಗೆ ಚಿಕಿತ್ಸೆ ಪಡೆಯುತ್ತಿದ್ದು, ವಿಪರೀತ ಮದ್ಯ ಸೇವನೆ ಚಟವನ್ನು ಹೊಂದಿದ್ದರು. ಕಳೆದ 15 ದಿನಗಳಿಂದ ಸರಿಯಾಗಿ ಔಷಧ ತೆಗೆದುಕೊಳ್ಳದೇ, ಮದ್ಯ ಸೇವನೆ ಮಾಡುತ್ತಿದ್ದರು ಎನ್ನಲಾಗಿದೆ.

ಸಹೋದರ ನಿತೇಶ್‌ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next