Advertisement

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

12:26 PM Nov 30, 2021 | Team Udayavani |

ಹುಬ್ಬಳ್ಳಿ: ಇಲ್ಲಿನ ಸಿದ್ಧಾರೂಢಸ್ವಾಮಿ ಮಠದಲ್ಲಿರುವ ಹೊಂಡದಲ್ಲಿ ಮುಳಗಿ ಕೊಪ್ಪಳ ಜಿಲ್ಲೆಯ ಯುವಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ.

Advertisement

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕ ಕಲ್ಲೂರನ ದೇವಪ್ಪ ಉಮೇಶಪ್ಪ ಜಾಲಿಹಾಳ (21 ವ) ಮೃತಪಟ್ಟಿದ್ದಾನೆ.

ಇದನ್ನೂ ಓದಿ:ಸಿದ್ದರಾಮಯ್ಯ ಮತ್ತು ಜಿ.ಟಿ.ದೇವೇಗೌಡ ಲವ್ ಬರ್ಡ್ಸ್ ತರಹ: ಎಸ್‌ಟಿ ಸೋಮಶೇಖರ್

ಮೂವರು ಸ್ನೇಹಿತರು ಹೊಂಡದ ಮಧ್ಯ ಇರುವ ಮಂಟಪಕ್ಕೆ ಹೋಗಿದ್ದಾರೆ. ಇಬ್ಬರು ಮಂಟಪ ಹತ್ತಿ ದಡ ಸೇರಿದರೆ, ಉಮೇಶಪ್ಪ ದಡ ಸೇರಲಾಗದೆ ಮುಳುಗಿ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next