Advertisement

ಕ್ಷುಲ್ಲಕ ವಿಚಾರಕ್ಕೆ ಯುವಕನ ಕೊಂದು ಠಾಣೆಗೆ ಬಂದು ಶರಣಾದ

10:50 AM Aug 10, 2023 | Team Udayavani |

ಬೆಂಗಳೂರು: ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪರಿಚಯಸ್ಥನೇ ಯುವಕನ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದು, ಬಳಿಕ ಠಾಣೆಗೆ ಶರಣಾಗಿರುವ ಘಟನೆ ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಕೊಮ್ಮಘಟ್ಟ ನಿವಾಸಿ ಚೇತನ್‌(21) ಮೃತ ಯುವಕ. ಆರೋಪಿ ಅಮಾನುಲ್ಲಾ (27) ಎಂಬಾತ ಠಾಣೆಗೆ ಬಂದು ಶರಣಾಗಿದ್ದಾನೆ.

ಅಮಾನುಲ್ಲಾ ಮತ್ತು ಚೇತನ್‌ ಪರಿಚಯಸ್ಥರಾಗಿದ್ದು, ಕೊಮ್ಮಘಟ್ಟದಲ್ಲಿ ಅಕ್ಕ-ಪಕ್ಕದ ನಿವಾಸಿಗಳಾಗಿದ್ದಾರೆ. ಈ ಹಿಂದೆ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿತ್ತು. ಮಂಗಳವಾರ ತಡರಾತ್ರಿ 11.30ರ ಸುಮಾರಿಗೆ ಕೊಮ್ಮಘಟ್ಟ ಮೈದಾನದಲ್ಲಿ ಮದ್ಯದ ಅಮಲಿನಲ್ಲಿ ಇಬ್ಬರ ನಡುವೆ ಸಣ್ಣ ವಿಚಾರಕ್ಕೆ ಜಗಳವಾಗಿದೆ. ಅದು ವಿಕೋಪಕ್ಕೆ ಹೋದಾಗ ಆರೋಪಿ, ಚೇತನ್‌ ಮೇಲೆ ಹಲ್ಲೆ ನಡೆಸಿ, ಅಲ್ಲೇ ಇದ್ದ ಕಲ್ಲಿನಿಂದ ತಲೆ ಮೇಲೆ ಎತ್ತಿ ಹಾಕಿ ಪರಾರಿಯಾಗಿದ್ದ. ರಾತ್ರಿಯಿಡೀ ತಲೆಮರೆಸಿಕೊಂಡಿದ್ದ ಆರೋಪಿ, ಬುಧವಾರ ಬೆಳಗ್ಗೆ ಠಾಣೆಗೆ ಬಂದು, ಕೊಲೆ ವಿಚಾರ ತಿಳಿಸಿ ಶರಣಾಗಿದ್ದಾನೆ. ಜತೆಗೆ ಮೃತದೇಹ ತೋರಿಸುತ್ತೇ ನೆಂದು ಹೇಳಿದ್ದಾನೆ. ಪೊಲೀಸರು, ಆತನನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ.

ಆರೋಪಿ ಅಮಾನುಲ್ಲಾ, ಜ್ಞಾನಭಾರತಿ ಆರ್‌ಟಿಒ ಕಚೇರಿಯಲ್ಲಿ ಮಧ್ಯವರ್ತಿಯಾಗಿ ಕೆಲಸ ಮಾಡಿಕೊಂಡಿದ್ದು, ಈತನ ವಿರುದ್ಧ ಈ ಹಿಂದೆ ಕುಂಬಳಗೊಡು ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿದೆ ಎಂಬುದು ಗೊತ್ತಾಗಿದೆ.  ಘಟನಾ ಸ್ಥಳಕ್ಕೆ ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ್‌ ನಿಂಬರಗಿ, ಕೆಂಗೇರಿ ಉಪವಿಭಾಗದ ಎಸಿಪಿ, ಕೆಂಗೇರಿ ಠಾಣಾಧಿಕಾರಿಗಳು, ವಿಧಿವಿಜ್ಞಾನ ಪ್ರಯೋಗಾಲಯ, ಶ್ವಾನದಳ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next