Advertisement

ಯಡಿಯೂರಪ್ಪ ರಾಜೀನಾಮೆಯಿಂದ ಮನನೊಂದು ಬೊಮ್ಮಲಾಪುರದ ಯುವಕ ಆತ್ಮಹತ್ಯೆ

10:54 AM Jul 27, 2021 | Team Udayavani |

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಯಡಿಯೂರಪ್ಪ ಅವರ ಕಟ್ಟಾ ಅಭಿಮಾನಿ ರವಿ (30 ವ) ಎಂಬ ಯುವಕ ನೇಣು ಬಿಗಿದು ಮಂಗಳವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಈತ ಗ್ರಾಮದಲ್ಲಿ ಕ್ಯಾಂಟೀನ್ ನಡೆಸುತ್ತಿದ್ದು, ಯಡಿಯೂರಪ್ಪ ಅವರ ಕಟ್ಟಾ ಅಭಿಮಾನಿಯಾಗಿದ್ದರು. ಅವರ ರಾಜೀನಾಮೆಯಿಂದ ಮನನೊಂದಿದ್ದರು.  ನಿನ್ನೆಯಿಂದಲೂ ಈ ಬಗ್ಗೆ ಬಹಳ ಬೇಸರದಿಂದ ಇದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಪೊಲೀಸರು ಸ್ಥಳಕ್ಕೆ ಇನ್ನೂ ಭೇಟಿ ನೀಡಿರಲಿಲ್ಲ.

ಇದನ್ನೂ ಓದಿ:ಅಸ್ಸಾಂ-ಮಿಜೋರಾಂ ಗಡಿ ವಿವಾದ: ಹಿಂಸಾಚಾರದಲ್ಲಿ ಎಂಟು ಪೊಲೀಸರು ಹುತಾತ್ಮ

ಇನ್ನೂ ಕೆಲವು ಮೂಲಗಳ ಪ್ರಕಾರ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಪೊಲೀಸರ ತನಿಖೆಯಿಂದ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಾಗಿದೆ.

Advertisement

ಬಿಎಸ್ ವೈ ಬೇಸರ: ರವಿ ಆತ್ಮಹತ್ಯೆ ವಿಚಾರ ತಿಳಿದ ಬಿ ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ನನ್ನ ರಾಜೀನಾಮೆಯಿಂದ ಮನನ್ನೊಂದ ಗುಂಡ್ಲುಪೇಟೆ ತಾಲೂಕು ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ. ರಾಜಕಾರಣದಲ್ಲಿ ಏರಿಳಿತಗಳು ಸಹಜ, ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು.ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ ಎಂದಿದ್ದಾರೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next