Advertisement

ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವಕ ಆತ್ಮಹತ್ಯೆ: ಈ ಹಿಂದೆ ಎರಡು ಬಾರಿ ಪ್ರಯತ್ನ ಮಾಡಿದ್ದ!

11:56 AM Jun 25, 2021 | Team Udayavani |

ಮೈಸೂರು: ತನ್ನ ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿ ಬಳಿ ನಡೆದಿದೆ.

Advertisement

ಎನ್.ಆರ್.ಮೊಹಲ್ಲಾ ನಿವಾಸಿ ಎಸ್.ಕಾರ್ತಿಕ್ (30 ವ) ಮೃತಪಟ್ಟ ಯುವಕ. ಮೆಡಿಕಲ್ ರೆಪ್ರೆಂಸೆಂಟೇಟಿವ್ ಆಗಿದ್ದ ಕಾರ್ತಿಕ್ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿ ಬಳಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎನ್.ಆರ್.ಮೊಹಲ್ಲಾದಲ್ಲಿ ವಾಸವಿದ್ದ ಕೊಠಡಿಯಲ್ಲಿ ಡೆತ್ ನೋಟ್ ಪತ್ತೆಯಾಗಿದೆ. “ಸ್ನೇಹಿತರೇ ನನ್ನಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮಿಸಿ. ಇನ್ನು ಮುಂದೆ ನಾನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಇಂಗ್ಲಿಷ್‌ನಲ್ಲಿ ಡೆತ್ ನೋಟ್ ಬರೆಯಲಾಗಿದೆ.

ಇದನ್ನೂ ಓದಿ:ಮೈಸೂರು: ಲಾಕ್‌ಡೌನ್‌ನಿಂದ ಕೆಲಸ ಇಲ್ಲದೇ ಮನನೊಂದ ಯುವಕ ಆತ್ಮಹತ್ಯೆ

ಕಾರ್ತಿಕ್ ರ ತಾಯಿ ಡಾ.ಪಾರ್ವತಿ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದರು. ನಂತರ ತಂದೆ ಶಿವಲಿಂಗಯ್ಯ ಅವರೂ ಮೃತಪಟ್ಟಿದ್ದರು. ಇದಾದ ಬಳಿಕ ಕಾರ್ತಿಕ್ ಚಿಕ್ಕಮ್ಮನ ಆಸರೆಯಲ್ಲಿದ್ದರು.

Advertisement

3ನೇ ಆತ್ಮಹತ್ಯೆ ಯತ್ನ: ಕಾರ್ತಿಕ್ ಈ ಹಿಂದೆಯೂ ಎರಡು ಬಾರಿ ಆತ್ಮಹತ್ಯೆ ಯತ್ನ ಮಾಡಿದ್ದರು.ತಂದೆ-ತಾಯಿ ಕಳೆದುಕೊಂಡು ಆಘಾತಕ್ಕೆ ಒಳಗಾಗಿದ್ದ ಕಾರ್ತಿಕ್ ತಾಯಿ ಸಾವನ್ನಪ್ಪಿದ ದಿನ ವಿಷ ಸೇವಿಸಿದ್ದರು. ಬಳಿಕ ತಂದೆ ಸಾವನ್ನಪ್ಪಿದ ದಿನ ರೈಲಿನಿಂದ ಕೆಳಗೆ ಜಿಗಿದಿದ್ದ. ಇದೀಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next