Advertisement

Udupi: ನೇಣು ಬಿಗಿದು ಆತ್ಮಹತ್ಯೆ

08:13 PM Mar 28, 2024 | Team Udayavani |

ಉಡುಪಿ: ವ್ಯಕ್ತಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Advertisement

ದೊಡ್ಡಣಗುಡ್ಡೆಯ ಬಳಿ ಇರುವ ಕರ್ನಾಟಕ ಹೌಸಿಂಗ್‌ ಬೋರ್ಡ್‌ ಮನೆಯಲ್ಲಿ ವಾಸವಾಗಿರುವ ರಾಜೇಶ್‌ ಅವರು ಮಾ. 26ರಂದು ಕುಟುಂಬದವರೊಂದಿಗೆ ರಾತ್ರಿ ಊಟ ಮಾಡಿ ಹಾಲ್‌ನಲ್ಲಿ ಕುಳಿತಿದ್ದರು. ರಾತ್ರಿ 1.30ರ ಸುಮಾರಿಗೆ ಮನೆಯ ಕಾಂಪೌಂಡ್‌ ಪಕ್ಕದಲ್ಲಿದ್ದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿದ್ದವರನ್ನು ಕೂಡಲೇ ಬಾಳಿಗಾ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.

ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಿದ್ದು, ಚಿಕಿತ್ಸೆಯಲ್ಲಿರುವಾಗ ಮಾ. 28ರಂದು ಮೃತಪಟ್ಟಿದ್ದಾರೆ ಎಂದು ಮೃತರ ಪುತ್ರ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next