Advertisement

Crime: ಪ್ರೇಯಸಿ ಮನೆಯಲ್ಲೇ ಪ್ರಿಯಕರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

12:55 PM Dec 08, 2023 | Team Udayavani |

ಬೆಂಗಳೂರು: ಪ್ರೇಯಸಿ ಪ್ರೀತಿ ನಿರಾಕರಿಸಿದ್ದಕ್ಕೆ ಮನನೊಂದ ಪ್ರಿಯಕರ ಆಕೆಯ ಮನೆ ಮುಂದೆಯೇ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಗೇರಿಯ ಕೋಡಿಪಾಳ್ಯದಲ್ಲಿ ನಡೆದಿದೆ. ‌

Advertisement

ಅನೇಕಲ್ ತಾಲೂಕಿನ ಜಿಗಣಿಯ ಕಲ್ಲುಬಾಲು ಗ್ರಾಮದ ರಾಕೇಶ್‌(26) ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ. ಬುಧವಾರ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಕೋಡಿಪಾಳ್ಯದಲ್ಲಿ ಘಟನೆ ನಡೆದಿದ್ದು, ಗುರುವಾರ ಬೆಳಗ್ಗೆ ಯುವಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದರು.

ಹೆಮ್ಮಿಗೆಪುರ ಮೂಲದ ಯುವತಿ ಕೆಲ ವರ್ಷಗಳಿಂದ ಕೋಡಿಪಾಳ್ಯದಲ್ಲಿ ಬಾಡಿಗೆ ಮನೆಯೊಂದರಲ್ಲಿ ಪೋಷಕರ ಜತೆ ವಾಸವಾಗಿದ್ದಾಳೆ. ಇನ್ನು ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ ರಾಕೇಶ್‌, ಹೆಮ್ಮಿಗೆಪುರದಲ್ಲಿದ್ದ ಸಂಬಂಧಿಕರ ಮನೆಗೆ ಬಂದಾಗ ಯುವತಿಯ ಪರಿಚಯವಾಗಿ, ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಗಿದ್ದು, ಕಳೆದ ಐದಾರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಆ ಯುವತಿಗೆ ಬೇರೆ ಯುವಕನೊಂದಿಗೆ ನಿಶ್ಚಿತಾರ್ಥವಾಗಿತ್ತು. ಹೀಗಾಗಿ ಯುವತಿ ಆತನಿಂದ ಅಂತರ ಕಾಯ್ದುಕೊಂಡಿದ್ದಳು. ತಾನು ಪ್ರೀತಿಸಿದ ಯುವತಿ ಬೇರೆ ಯುವಕನ ಜತೆ ಓಡಾಡುತ್ತಿರುವುದು ಕಂಡು ಆಕ್ರೋಶಗೊಂಡಿದ್ದ ರಾಕೇಶ್‌, ಯುವತಿಗೆ ಫೋನ್‌ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದ. ‌

ಈ ಬಗ್ಗೆ ಯುವತಿ ತಲೆಕೆಡಿಸಿಕೊಂಡಿರಲಿಲ್ಲ. ಆದರೆ ಬುಧವಾರ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ನೇರವಾಗಿ ಯುವತಿ ಮನೆಗೆ ಹೋಗಿದ್ದಾನೆ. ತನ್ನನ್ನು ಪ್ರೀತಿಸುವಂತೆ ಕೇಳಿಕೊಂಡಿದ್ದಾನೆ. ಅದಕ್ಕೆ ಯುವತಿ ನಿರಾಕರಿಸಿದ್ದಾಳೆ. ಈ ವೇಳೆ ಇಬ್ಬರ ಮಧ್ಯೆ ಜಗಳವಾ ಗಿದ್ದು, ಅದರಿಂದ ಮನನೊಂದ ಯುವಕ ಪ್ರೀತಿಸದಿ ದ್ದರೆ ಸಾಯುವುದಾಗಿ ಬೆದರಿಸಿ ಬಾಟಲ್‌ ನಿಂದ ತಂದಿದ್ದ ಪೆಟ್ರೋಲ್ ಮೈ ಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ನೋಡು ನೋಡುತ್ತಿದ್ದಂತೆ ಬೆಂಕಿ ಇಡೀ ದೇಹಕ್ಕೆ ವ್ಯಾಪಿಸಿ ಗಂಭೀರವಾಗಿ ಗಾಯಗೊಂಡು ಅಸ್ವಸ್ಥಗೊಂಡಿದ್ದ. ಕೂಡಲೇ ಸ್ಥಳೀಯರು ಬೆಂಕಿ ನಂದಿಸಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ದೇಹದ ಬಹುತೇಕ ಭಾಗಗಳಲ್ಲಿ ಶೇ.60ರಷ್ಟು ಸುಟ್ಟ ಗಾಯಗಳಾಗಿದ್ದರಿಂದ ಚಿಕಿತ್ಸೆ ಫ‌ಲಕಾರಿಯಾಗದೆ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದರು.

ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next