Advertisement

Koppala; ನೀರಿನ ಟ್ಯಾಂಕ್ ಮೇಲಿಂದ ಬಿದ್ದ ಯುವಕ!

01:04 PM Jun 29, 2024 | Team Udayavani |

ಕೊಪ್ಪಳ: ಯುವಕನೋರ್ವ ನೀರಿನ ಟ್ಯಾಂಕ್ ಮೇಲಿಂದ ಬಿದ್ದ ಘಟನೆ ಕೊಪ್ಪಳದ ಗವಿಮಠದಲ್ಲಿ ಶನಿವಾರ ನಡೆದಿದೆ.

Advertisement

ಟ್ಯಾಂಕ್ ನಿಂದ ಬಿದ್ದು ಗಾಯಗೊಂಡ ಯುವಕನನ್ನು ಕುಕನೂರು ತಾಲೂಕಿನ ಆಡೂರು ಗ್ರಾಮದ ಪ್ರಕಾಶ್ ಎಂದು ಗುರುತಿಸಲಾಗಿದೆ.

ಪ್ರಕಾಶ್ ಅವರು ಇಂದು ಬೆಳಗ್ಗೆ ಗವಿಮಠದ ಬಳಿಯ ನೀರಿನ ಟ್ಯಾಂಕ್ ಮೇಲೆ ಹತ್ತಿದ್ದ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಕೆಳಗೆ ಇಳಿಯುವಂತೆ ಮನವಿ ಮಾಡಿದರು. ಆದರೆ ‘ನಾನು ಮೇಲಿಂದ ಹಾರಿ ಸಾಯುವೆ’ ಎಂದು ಯುವಕ ಬೊಬ್ಬೆಯಿಟ್ಟಿದ್ದ. ಟ್ಯಾಂಕ್ ಮೇಲಿರದ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಳಿಕ ಆತನ ಟ್ಯಾಂಕ್ ನಿಂದ ಕೆಳಗೆ ಇಳಿಯುವ ವೇಳೆ ಕನಿಷ್ಠ 20 ಅಡಿ ಎತ್ತರದಿಂದ ಬಿದಿದ್ದಾನೆ. ಕೂಡಲೇ ಆತನನ್ನು ಪೊಲೀಸ್ ವಾಹನದಲ್ಲೇ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಘಿದೆ.

ಗಾಯಾಳು ಯುವಕನಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಪ್ಪಳ ನಗರ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next