Advertisement

ಸುರತ್ಕಲ್: ಕೇಬಲ್ ಆಂಟೆನಾ ಸರಿಪಡಿಸುತ್ತಿದ್ದ ವೇಳೆ ಕಟ್ಟಡದಿಂದ ಬಿದ್ದು ವ್ಯಕ್ತಿ ಗಂಭೀರ

01:05 AM Mar 04, 2022 | Team Udayavani |

ಸುರತ್ಕಲ್: ವ್ಯಕ್ತಿಯೊಬ್ಬರು 5ನೇ ಮಹಡಿಯಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ.

Advertisement

ಸುರತ್ಕಲ್ ಎನ್. ಐ. ಟಿ. ಕೆ. ಅಸಿಸ್ಟೆಂಟ್ ಪ್ರೊಫೆಸರ್ ಮನೀಶ್ ಕುಮಾರ್ ( 37) ಗಾಯಗೊಂಡಿರುವ ವ್ಯಕ್ತಿ ಎಂದು ತಿಳಿದು ಬಂದಿದೆ.

ಬುಧವಾರ ಸಂಜೆ ಕಟ್ಟಡದ 5ನೇ ಮಹಡಿಯಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿರುವ ಅವರು,ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೇಬಲ್ ಆಂಟೆನಾ ಸರಿಪಡಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ  ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಅವರು ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next