Advertisement

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

02:10 PM Apr 08, 2024 | Team Udayavani |

ಯಾದಗಿರಿ: ಯುಗಾದಿ ಅಮವಾಸ್ಯೆ ದಿನದಂದೇ ವ್ಯಕ್ತಿಯೊಬ್ಬರನ್ನು ಬರ್ಬರ ಹತ್ಯೆ ಮಾಡಿದ ಘಟನೆ ಯಾದಗಿರಿ‌ ಜಿಲ್ಲೆಯ ಸುರಪುರ ತಾಲೂಕಿನ ಏವೂರು ಗ್ರಾಮದಲ್ಲಿ ನಡೆದಿದೆ.

Advertisement

ಏವೂರು ಗ್ರಾಮದ ನಿವಾಸಿ ಬಂದೇನವಾಜ್ (40) ಎಂಬಾತನೇ ಕೊಲೆಯಾದ ವ್ಯಕ್ತಿ. ಮಾರಕಾಸ್ತ್ರ ಬಳಸಿ ಬರ್ಬರ ಹತ್ಯೆ ಮಾಡಲಾಗಿದೆ.

ಹೊರಗೆ ಬಹಿರ್ದೆಸೆಗೆ ತೆರಳಿದ ಬಂದೇನವಾಜ್ ರನ್ನು ಮಾರಕಾಸ್ತ್ರಗಳಿಂದ ಸೋಮವಾರ ಬೆಳಗಿನ ಜಾವ ಹತ್ಯೆ ಮಾಡಲಾಗಿದೆ.

ಕೊಲೆ ಘಟನೆಯಿಂದ ಏವೂರು ಗ್ರಾಮಸ್ಥರು ಬೆಚ್ವಿಬಿದ್ದಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಎಸ್ಪಿ ಜಿ. ಸಂಗೀತಾ ಭೇಟಿ,‌ ಪರಿಶೀಲನೆ ನಡೆಸಿದರು. ಕೆಂಭಾವಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next