Advertisement

Lingsugur; ತಾಯಿ, ಹೆಂಡತಿಯನ್ನು ಕೊಂದು ಆರೋಪಿ ಪರಾರಿ

03:28 PM Aug 23, 2024 | Team Udayavani |

ರಾಯಚೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತನ್ನ ತಾಯಿ ಹಾಗೂ ಹೆಂಡತಿಯನ್ನು ಕೊಲೆ ಮಾಡಿದ ಘಟನೆ ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ನಡೆದಿದೆ.

Advertisement

ದ್ಯಾಮಮ್ಮ (66) ಹಾಗೂ ಜ್ಯೋತಿ (23) ಕೊಲೆಯಾದವರು. ಕೊಲೆಗೈದ ಆರೋಪಿ ದುರಗಪ್ಪ ಎನ್ನಲಾಗಿದೆ.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಡಿ ಗ್ರೂಪ್ ನೌಕರನಾಗಿದ್ದ ದುರಗಪ್ಪ ಕುಟುಂಬದೊಂದಿಗೆ ಆಸ್ಪತ್ರೆಯ ಕ್ವಾರ್ಟರ್ಸ್‌ನಲ್ಲಿ ವಾಸವಾಗಿದ್ದು, ನಿತ್ಯ ಕಲಹ ನಡೆಯುತ್ತಿತ್ತು. ಆರೋಪಿಯು ಮದ್ಯ ಸೇವಿಸಿ ತಾಯಿ ಹಾಗೂ ಹೆಂಡತಿಗೆ ಮನಸೋ ಇಚ್ಛೆ ಥಳಿಸುತ್ತಿದ್ದ. ಅದೇ ರೀತಿ ಜಗಳ ನಡೆದಾಗ ಹಲ್ಲೆ ಮಾಡಿದ್ದು ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿ ದುರಗಪ್ಪ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಮುದಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಪತ್ತೆಗೆ ಶೋಧ ನಡೆಸಿದ್ದಾರೆ‌.

Advertisement

Udayavani is now on Telegram. Click here to join our channel and stay updated with the latest news.

Next