Advertisement

Saidapur: ಕುಟುಂಬಿಕ ಕಲಹದಿಂದ ಪತ್ನಿ, ಅತ್ತೆ, ಮಾವನನ್ನೇ ಹತ್ಯೆ ಮಾಡಿದ!

04:21 PM Jul 18, 2024 | Team Udayavani |

ಸೈದಾಪುರ/ಯಾದಗಿರಿ: ವ್ಯಕ್ತಿಹೋರ್ವ ತನ್ನ ಪತ್ನಿ ಅತ್ತೆ, ಮಾವನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗುರುವಾರ ಯಾದಗಿರಿ ಜಿಲ್ಲೆಯ ಸೈದಾಪುರ ಬಳಿ ನಡೆದಿದೆ. ಕುಟುಂಬದಲ್ಲಿ ಉಂಟಾದ ಕಲಹವು ಘಟನೆಗೆ ಕಾರಣವಾಗಿದೆ ಎನ್ನಲಾಗಿದೆ.

Advertisement

ಕೊಲೆಯಾದ ಮೂವರು ದಾವಣಗೆರೆ ಮೂಲದವರಾಗಿದ್ದು, ಪತ್ನಿ ಅನ್ನಪೂರ್ಣ (25), ಅತ್ತೆ ಕವಿತಾ (45) ಮಾವ ಬಸವರಾಜಪ್ಪ (52) ಕೊಲೆಯಾದ ದುರ್ದೈವಿಗಳು. ಮುನಗಾಲ ಗ್ರಾಮದ ನಿವಾಸಿ ನವೀನ (35) ಕೊಲೆ ಮಾಡಿದ ಆರೋಪಿ.

ಆರೋಪಿ ನವೀನ್ ಕಳೆದ ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ದಾವಣಗೆರೆ ಮೂಲದ ಅನ್ನಪೂರ್ಣಳನ್ನು ಮದುವೆಯಾಗಿದ್ದ. ಅನ್ನಪೂರ್ಣ ಮತ್ತು ನವೀನ್ ದಂಪತಿಗೆ ಒಂದು ಹೆಣ್ಣು ಮಗು ಕೂಡ ಇದೆ. ಆದರೆ ಒಂದು ವರ್ಷದ ಹಿಂದೆ ಗಂಡನ ಕಿರುಕುಳ ತಾಳದೆ ಅನ್ನಪೂರ್ಣ ವಾಪಸ್ ತವರು ಮನೆಗೆ ಹೋಗಿದ್ದಳು.

ಆದರೆ ಬುಧವಾರ ಮತ್ತೆ ಜೊತೆಗೆ ಇರೋಣಾ ಎಂದು ನವೀನ್ ಪತ್ನಿಯನ್ನು ಕರೆದಿದ್ದ. ಹೀಗಾಗಿ ನ್ಯಾಯ ಪಂಚಾಯತಿ ಮಾಡಿ ಮತ್ತೆ ಜೊತೆಗಿರಲು ಒಪ್ಪಿಗೆ ನೀಡಿದ ನಂತರ ಮಗಳನ್ನ ಗಂಡ ಮನೆಗೆ ಬಿಡಲು ದಾವಣಗೆರೆಯಿಂದ ಅನ್ನಪೂರ್ಣ ಪೋಷಕರು ಬಂದಿದ್ದರು. ರಾಜಿ ಪಂಚಾಯತಿ ಬಳಿಕ ಅತ್ತೆ ಮಾವನನ್ನು ಬಸ್ ನಿಲ್ದಾಣಕ್ಕೆ ಕಾರಿನಲ್ಲಿ ಬಿಡಲು ಪತಿ ಪತ್ನಿ ಹೋಗಿದ್ದರು. ಈ ವೇಳೆ ನವೀನ್ ಕಬ್ಬಿಣದ ರಾಡ್ ಹಾಗೂ ಚಾಕುನಿಂದ ಕೊಲೆ ಮಾಡಿದ್ದಾನೆ.

Advertisement

ಕೊಲೆ ಮಾಡಿ ವಡಗೇರ ತಾಲ್ಲೂಕಿನ ಜೋಳದಡಗಿ ಬಳಿ ಶವ ಬಿಸಾಡಿದ್ದಾನೆಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಸದ್ಯ ಅನ್ನಪೂರ್ಣ ಶವವನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next