Advertisement

ಸಿ.ವಿ.ರಾಮನ್‌ನಗರ : ಮ್ಯಾನ್‌ಹೋಲ್‌ಗೆ ಮೂವರು ಕಾರ್ಮಿಕರು ಬಲಿ 

09:28 AM Mar 07, 2017 | Team Udayavani |

ಬೆಂಗಳೂರು : ನಗರದ ಸಿ.ವಿ.ರಾಮನ್‌ನಗರದ ಕಗ್ಗದಾಸಪುರ ಮುಖ್ಯರಸ್ತೆಯಲ್ಲಿ ದುರಸ್ತಿಗೆಂದು ಮ್ಯಾನ್‌ಹೋಲ್‌  ಒಳಗೆ ಇಳಿದಿದ್ದ ಮೂವರು ಕಾರ್ಮಿಕರು ಉಸಿರುಗಟ್ಟಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

Advertisement

11 ಗಂಟೆಯ ವೇಳೆಗೆ ಟ್ರ್ಯಾಕ್ಟರ್‌ನಲ್ಲಿ ಬಂದಿದ್ದ ಇಬ್ಬರು ಕಾರ್ಮಿಕರು ನೀರಿನ ಸೋರಿಕೆ ತಡೆಗೆಂದು ಮ್ಯಾನ್‌ಹೋಲ್‌ನೊಳಗೆ ಇಳಿದಿದ್ದಾರೆ. ಆಮ್ಲಜನಕದ ಕೊರತೆಯಿಂದ ಉಸಿರಾಟ ಸಾಧ್ಯವಾಗದೆ ಬೊಬ್ಬಿಟ್ಟಿದ್ದಾರೆ. ಕೂಡಲೆ ನೆರವಿಗಾಗಿ ಟ್ರ್ಯಾಕ್ಟರ್‌ ಚಾಲಕ ಮ್ಯಾನ್‌ಹೋಲ್‌ನೊಳಗೆ ಇಳಿದಿದ್ದು, ಮೂವರು ಉಸಿರು ಗಟ್ಟಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಕೆಲಹೊತ್ತಲ್ಲೇ ಅಗ್ನಿ ಶಾಮಕದಳದ ಸಿಬಂದಿಗಳು ಸ್ಥಳಕ್ಕಾಗಮಿಸಿದರಾದರೂ ಅದಾಗಲೇ ಮೂವರ ಪ್ರಾಣಪಕ್ಷಿ ಹಾರಿ ಹೋಗಿತ್ತು. ಮೂವರ ಶವಗಳನ್ನು ಮೇಲಕ್ಕೆತ್ತಲಾಗಿದ್ದು ಅವರ ಗುರುತು ಇನ್ನಷ್ಟೆ ಪತ್ತೆಯಾಗಬೇಕಿದೆ.

ಈ ಬಗ್ಗೆ ನಗರ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next