Advertisement

ಬೆಳ್ತಂಗಡಿ: ಮೀನು ಹಿಡಿಯಲು ಹೋದ ವ್ಯಕ್ತಿ ಅನುಮಾನಸ್ಪದವಾಗಿ ನಾಪತ್ತೆ!

04:18 PM Dec 08, 2020 | keerthan |

ಬೆಳ್ತಂಗಡಿ: ತಾಲೂಕಿನ ಉಜಿರೆ ಗ್ರಾಮದ ಶಿವಾಜಿ ನಗರ ರೆಂಜಳ ನಿವಾಸಿ ಅನುಮಾನಸ್ಪದ ರೀತಿಯಲ್ಲಿ ನಾಪತ್ತೆಯಾದ ಘಟನೆ ನಡೆದಿದೆ.

Advertisement

ಉಜಿರೆ ಶಿವಾಜಿ ನಗರದ ರೆಂಜಳ ನಿವಾಸಿ ರಮೇಶ್ (48) ಎಂಬುವರು ಡಿ.7ರಂದು ಸಂಜೆ 5 ಗಂಟೆ ಬಳಿಕ ನಾಪತ್ತೆಯಾಗಿದ್ದಾರೆ.

ಅವರ ಮೊಬೈಲ್ ಫೋನ್ ಇಂದು ಬೆಳಗ್ಗೆ 10 ಗಂಟೆ ಬಳಿಕ ಸ್ವಿಚ್ಡ್ ಆಫ್ ಆಗಿತ್ತು ಎಂದು ಅವರ ಸಹೋದರ ತಿಳಿಸಿದ್ದಾರೆ. ಬೆಳ್ತಂಗಡಿ ಸೋಮಾವತಿ ನದಿಯ ಜಾಕ್ ವೆಲ್ ಸಮೀಪ ದಡದಲ್ಲಿ ಇಂದು ಸಂಜೆ ಅವರ ಉಡುಗೆ ಮತ್ತು ಮೀನು ಹಿಡಿಯುವ ಬಲೆ, ಮೊಬೈಲ್ ಪತ್ತೆಯಾಗಿದೆ.

ಇದನ್ನೂ ಓದಿ:ವಿವಾಹ ಪ್ರಸ್ತಾಪಕ್ಕೆ ನಕಾರ: ಪ್ರಿಯತಮೆ ತಂದೆಯನ್ನು ಹತ್ಯೆಗೈದ ಪ್ರಿಯಕರ!

ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಭೇಟಿ ನೀಡಿ ನದಿಯಲ್ಲಿ ಶೋಧಕಾರ್ಯ ಮುಂದುವರೆಸಿದೆ. ಮುಳುಗು ತಜ್ಞ ಇಸ್ಮಾಯಿಲ್ ಸಂಜಯ ನಗರ ನದಿಯಲ್ಲಿ ಮುಳುಗಿ ಪರಿಶೀಲಿಸಿದ್ದಾರೆ.

Advertisement

ರಮೇಶ್ ಕೂಲಿ ಕೆಲಸಕ್ಕೆ ಹೋಗುತ್ತಿದ್ದು, ಕಳೆದ ಎರಡು ವರ್ಷಗಳಿಂದ ಮೀನು ಹಿಡಿಯಲು ತೆರಳುತ್ತಿರಲಿಲ್ಲ. ಸದ್ಯ ರಮೇಶ್ ಏಕಾಏಕಿ ನಾಪತ್ತೆಯಾಗಿದ್ದು, ಅವರೊಂದಿಗೆ ಮೀನು ಹಿಡಿಯಲು ಮತ್ತೊಬ್ಬ ವ್ಯಕ್ತಿ ಹೋಗಿರುವ ಕುರಿತು ಸಿಸಿ ಕ್ಯಾಮರದಲ್ಲಿ ದಾಖಲಾಗಿದೆ. ಆ ವ್ಯಕ್ತಿಯ ಬಗ್ಗೆಯೂ ಇದುವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಶೋಧಕಾರ್ಯ ಮುಂದುವರೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next