Advertisement

Heart Attack: ಕಿಷ್ಕಿಂಧಾ ಅಂಜನಾದ್ರಿ ಬೆಟ್ಟ ಹತ್ತಿ ಇಳಿಯುವಾಗ ಹೃದಯಾಘಾತದಿಂದ ಓರ್ವ ಸಾವು

03:46 PM Nov 04, 2023 | Team Udayavani |

ಗಂಗಾವತಿ: ತಾಲೂಕಿನ ಕಿಷ್ಕಿಂಧಾ ಅಂಜನಾದ್ರಿ ಬೆಟ್ಟವನ್ನು ಹತ್ತಿ ಇಳಿಯುವ ಸಂದರ್ಭ ಯುವ ಭಕ್ತನೊರ್ವನಿಗೆ ಹೃದಯಘಾತ ಸಂಭವಿಸಿ ಆನೆಗೊಂದಿ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನ.4ರ ಶನಿವಾರ ನಡೆದಿದೆ.

Advertisement

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದ ನಿವಾಸಿ ಕಾರ್ತಿಕ್ ದಯಾಗ (26) ಮೃತಪಟ್ಟ ಯುವಕ.

ಕಾರ್ತಿಕ್ ತನ್ನ ಗೆಳೆಯನೊಂದಿಗೆ ಅಂಜನಾದ್ರಿಗೆ ಆಗಮಿಸಿ ಬೆಟ್ಟ ಹತ್ತಿ ಇಳಿಯುವ ಸಂದರ್ಭದಲ್ಲಿ ಹೃದಯಾಘಾತ ಕಾಣಿಸಿಕೊಂಡಿದೆ. ಕೂಡಲೇ ಆತನನ್ನು ಆನೆಗೊಂದಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಗಂಗಾವತಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಹೃದಯಾಘಾತವಾಗಿ ಸಾವನಪ್ಪಿದ್ದಾನೆ.

ಕಳೆದ ವರ್ಷ ಬೆಟ್ಟ ಹತ್ತುವಾಗ ಮತ್ತು ಇಳಿಯುವ ಸಂದರ್ಭ ಹಲವು ಜನರು ಹೃದಯಾಘಾತದಿಂದ ಮೃತಪಟ್ಟಿದ್ದು, ಅಂಜನಾದ್ರಿ ಬಳಿ ತುರ್ತು ಚಿಕಿತ್ಸೆಯ ವ್ಯವಸ್ಥೆ ಇನ್ನೂ ಇಲ್ಲ. ನಿತ್ಯವೂ ಅಂಜನಾದ್ರಿಗೆ ಸಾವಿರಾರು ಭಕ್ತರು, ಪ್ರವಾಸಿಗರು ಆಗಮಿಸುತ್ತಿದ್ದು, ಅನಾರೋಗ್ಯದ ಸಂದರ್ಭ ಚಿಕಿತ್ಸೆಯ ವ್ಯವಸ್ಥೆ ಮಾಡಬೇಕೆಂದು ಸ್ಥಳೀಯರು ಜಿಲ್ಲಾಡಳಿತ ಹಾಗೂ ಧಾರ್ಮಿಕ ದತ್ತಿ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next