Advertisement

ಕೋವಿಡ್ ಸೋಂಕಿತ ಸಾವು: ಸಂಬಂಧಿಯಿಂದ ಶುಶ್ರೂಷಕರ ಮೇಲೆ ಹಲ್ಲೆ, ಬಂಧನ

06:25 PM Jul 18, 2020 | keerthan |

ಬೀದರ್: ನಗರದ ಕೋವಿಡ್- 19 ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ಇಬ್ಬರು ಶುಶ್ರೂಷಕರ ಮೇಲೆ ಮೃತ ರೋಗಿಯ ಸಂಬಂಧಿಯೊಬ್ಬ ಹಲ್ಲೆ ಮಾಡಿರುವ ಘಟನೆ ಶನಿವಾರ ನಡೆದಿದ್ದು, ಇದನ್ನು ಖಂಡಿಸಿ ಶುಶ್ರೂಷಕರು ಕೆಲ ಕಾಲ ಪ್ರತಿಭಟನೆ ನಡೆಸಿದ್ದಾರೆ.

Advertisement

ನಗರದ ಮನೀಯಾರ್ ತಾಲೀಮ್‌ನ ನಿವಾಸಿಯೊಬ್ಬರು ಚಿಕಿತ್ಸೆ ಫಲಿಸದೆ ಕೋವಿಡ್-19 ಸೋಂಕಿತರೊಬ್ಬರು ಮೃತಪಟ್ಟಿದ್ದರು. ಇದರಿಂದ ಆಕ್ರೋಶಗೊಂಡ ಮೃತರ ಸಂಬಂಧಿಯೊಬ್ಬ ಶುಶ್ರೂಷಕರ ಜತೆ ವಾಗ್ವಾದ ನಡೆಸಿ ಏಕಾಏಕಿ ಹಲ್ಲೆ ನಡೆಸಿದ್ದಾರೆ.

ಇದನ್ನು ವಿರೋಧಿಸಿ ಸರ್ಕಾರಿ ಶುಶ್ರೂಷಕರ ಸಂಘದ ಅಧ್ಯಕ್ಷ ರಾಜಕುಮಾರ ಮಾಳಗೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಂತರ ಸ್ಥಳಕ್ಕೆ ನ್ಯೂ ಟೌನ್ ಠಾಣೆಯ ಪೊಲೀಸರು ಆಗಮಿಸಿ ಹಲ್ಲೆ ಮಾಡಿದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಶುಶ್ರೂಷಕರ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next