Advertisement

ಬಾಳೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಕೂಲಿ ಕಾರ್ಮಿಕ ಸಾವು

02:37 PM May 31, 2022 | Team Udayavani |

ಚಿಕ್ಕಮಗಳೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಿಳಗಲಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ವರದಿಯಾಗಿದೆ.

Advertisement

ಬಿಳಗಲಿ ಗ್ರಾಮದ ಸಂದೀಪ್ ಗೌಡ ಎಂಬವರ ಮನೆಯಲ್ಲಿ ದನ ಮೇಯಿಸಿಕೊಂಡಿದ್ದ ತಿಮ್ಮಪ್ಪ (55 ವ) ವಿದ್ಯುತ್ ಸ್ಪರ್ಶದಿಂದ ಮೃತರಾದ ಕಾರ್ಮಿಕ.

ಕಾರ್ಮಿಕನೊಂದಿಗೆ ಎರಡು ಹಸುಗಳು ಕೂಡಾ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿವೆ.

ಇದನ್ನೂ ಓದಿ:ಸರ್ಕಾರಗಳು ಕೃಷಿ, ಶಿಕ್ಷಣ, ಆರೋಗ್ಯಕ್ಕೆ ಹೆಚ್ಚು ಆದ್ಯತೆ ನೀಡಬೇಕು : ಡಾ.ಜಿ.ಪರಮೇಶ್ವರ್

ಮಂಗಳವಾರ ಬೆಳಗ್ಗೆ ಎಂದಿನಂತೆ ಹಸುಗಳನ್ನು ಮೇಯಿಸಲು ತೆರಳುತ್ತಿದ್ದ ವೇಳೆ ನೆಲದ ಮೇಲೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದಿದ್ದು, ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Advertisement

ಸ್ಥಳಕ್ಕೆ ಬಾಳೂರು ಪೊಲೀಸರು, ಮೆಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next