Advertisement

ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಮೃತ್ಯು

07:30 PM May 23, 2023 | Team Udayavani |

ಹಾವೇರಿ: ಜಿಲ್ಲೆಯ ಹಾನಗಲ್ಲ ತಾಲೂಕಿನ ಮಹಾರಾಜಪೇಟೆಯಲ್ಲಿ ಸಿಡಿಲು ಬಡಿದು ಕುರಿಗಾಹಿ ಮೃತಪಟ್ಟ ಘಟನೆ ನಡೆದಿದೆ.

Advertisement

ನಾಗರಾಜ ಲಕ್ಕಪ್ಪ ಮುತ್ನಾಳ(22) ಮೃತ ಯುವಕ. ಹೊಲದಲ್ಲಿ ಕುರಿ ಮೇಯಿಸಲು ತೆರಳಿದ್ದಾಗ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸಂಜೆ 5 ಗಂಟೆ ವೇಳೆಗೆ ರಭಸವಾದ ಮಳೆ-ಗಾಳಿ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಮೃತ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹಾನಗಲ್ಲಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next