Advertisement

ಕೊರಟಗೆರೆ: ಮಧುಮೇಹ ಕಾಯಿಲೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

07:57 PM Aug 23, 2022 | Team Udayavani |

ಕೊರಟಗೆರೆ: ಟೈಲರ್ ವೃತ್ತಿ ಮಾಡಿಕೊಂಡು ಜೀವನ ನಡೆಸುತ್ತಿದ್ದ ವ್ಯಕ್ತಿಯೋರ್ವ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಕೊರಟಗೆರೆ ಪಟ್ಟಣದ ಒಂದನೇ ವಾರ್ಡಿನ ಹನುಮಂತಪುರದ ಡಿಗ್ರಿ ಕಾಲೇಜು ಪಕ್ಕದಲ್ಲಿ ವಾಸವಾಗಿರುವ ರಾಜಣ್ಣನ ಮಗ ಮಹೇಶ (42) ಮೃತ ದುರ್ಧೈವಿ.

ಮೃತ ಮಹೇಶ ಕೊರಟಗೆರೆ ಪಟ್ಟಣದಲ್ಲಿ ಟೈಲರ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಎನ್ನಲಾಗಿದೆ. ಕಳೆದ ಏಳೆಂಟು ವರ್ಷಗಳಿಂದ ಮಧುಮೇಹದಿಂದ ಬಳಲುತ್ತಿದ್ದು ಎರಡು ವರ್ಷಗಳ ಹಿಂದೆ ಗ್ಯಾಂಗ್ರೀನ್ ಆಗಿ ಕಾಲಿನ ಎರಡು ಬೆರಳುಗಳನ್ನು ತೆಗೆದಿದ್ದರು. ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ವಾಸಿಯಾಗದೆ ಟೈಲರಿಂಗ್ ಕೆಲಸ ಮಾಡಲು ತೊಂದರೆಯಾಗುತ್ತಿದ್ದ ಕಾರಣದಿಂದ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ಕೊರಟಗೆರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಿಪಿಐ ಸುರೇಶ್ ಹಾಗೂ ಪಿಎಸ್ಐ ನಾಗರಾಜು ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next