Advertisement

BBMP garbage truck: ಕಸದ ಲಾರಿಗೆ ಬೈಕ್‌ ಢಿಕ್ಕಿ: ನೌಕರ ಸಾವು

10:36 AM Sep 26, 2023 | Team Udayavani |

ಬೆಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಕಸದ ಲಾರಿಗೆ ಹಿಂದಿನಿಂದ ಬೈಕ್‌ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಯನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಯಲಚೇನಹಳ್ಳಿ ನಿವಾಸಿ ಜಯಲಿಂಗ(25) ಮೃತ ಸವಾರ.

ಭಾನುವಾರ ತಡರಾತ್ರಿ 12.45ರ ಸುಮಾರಿಗೆ ಜಯನಗರ ಮೆಟ್ರೋ ನಿಲ್ದಾಣದ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಕನಕಪುರ ಮೂಲದ ಜಯಲಿಂಗ ಹೋಂ ಅಪ್ಲೆಯನೆನ್ಸ್‌ ಕಂಪನಿಯಲ್ಲಿ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದರು. ಪತ್ನಿ ಹಾಗೂ ಎಂಟು ತಿಂಗಳ ಮಗುವಿನೊಂದಿಗೆ ಯಲಚೇನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಗಿದ್ದರು.

ಭಾನುವಾರ ರಾತ್ರಿ ಸ್ನೇಹಿತನನ್ನು ಭೇಟಿಯಾಗಿ ಬಳಿಕ ಬೈಕ್‌ನಲ್ಲಿ ಮನೆಗೆ ವಾಪಾಸ್‌ ಹೋಗುತ್ತಿದ್ದರು. ಆಗ ವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡಿಕೊಂಡು ಬಂದ ಪರಿಣಾಮ ಜಯನಗರ ಮೆಟ್ರೋ ನಿಲ್ದಾಣದ ಕೆಳ ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡು ರಸ್ತೆ ಬಿದಿ ನಿಂತಿದ್ದ ಬಿಬಿಎಂಪಿ ಕಸದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಢಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಹಿತ ಜಯಲಿಂಗ ಲಾರಿಗೆ ಸಿಲುಕಿ ಗಂಭೀರ ಪೆಟ್ಟು ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಸಂಚಾರ ಪೊಲೀಸರು ಹೇಳಿದರು.

ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಜಯನಗರ ಸಂಚಾರ ಠಾಣೆ ಪೊಲೀಸರು, ಸುಮಾರು ಎರಡು ತಾಸು ಕಾರ್ಯಾಚರಣೆ ನಡೆಸಿ ಲಾರಿಗೆ ಸುಲಿಕಿದ್ದ ದ್ವಿಚಕ್ರ ವಾಹನ ಹಾಗೂ ಜಯಲಿಂಗನ ಮೃತದೇಹ ಹೊರಗೆ ತೆಗೆದು ಆ್ಯಂಬುಲೆನ್ಸ್‌ ಆಸ್ಪತ್ರೆಗೆ ಸಾಗಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬ ಸದಸ್ಯರಿಗೆ ಮೃತದೇಹ ಹಸ್ತಾಂತರಿಸಲಾಗಿದೆ. ಅತೀವೇಗ ಮತ್ತು ನಿರ್ಲಕ್ಷ್ಯ ಚಾಲನೆಯೇ ದುರ್ಘ‌ಟನೆಗೆ ಕಾರಣ ಎಂದು ಹೇಳಲಾಗಿದೆ.

Advertisement

ಜತೆಗೆ ಯಾವುದೇ ಸೂಚನೆ ಇಲ್ಲದೆ ಬಿಬಿಎಂಪಿ ಕಸದ ಲಾರಿಯನ್ನು ರಸ್ತೆ ಬದಿ ನಿಲುಗಡೆ ಮಾಡಿದ್ದೂ ಕಾರಣವಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು. ಈ ಸಂಬಂಧ ಜಯನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next