Advertisement

ಉಪ್ಪಿನಂಗಡಿ: ಜೀಪಿನಲ್ಲೇ ಹೃದಯ ಸ್ತಂಭನವಾಗಿ ಸಾವು

09:39 PM Dec 04, 2022 | Team Udayavani |

ಉಪ್ಪಿನಂಗಡಿ: ಜೀಪು ಚಲಾಯಿಸಿಕೊಂಡು ಬಂದ ವ್ಯಕ್ತಿಯೋರ್ವರು ಉಪ್ಪಿನಂಗಡಿಯ ಆಸ್ಪತ್ರೆ ಬಳಿ ಜೀಪು ನಿಲ್ಲಿಸುತ್ತಿದ್ದಂತೆಯೇ ಹೃದಯಸ್ತಂಭನಕ್ಕೆ ತುತ್ತಾಗಿದ್ದಾರೆ.

Advertisement

ಕೊಯಿಲ ಗ್ರಾಮದ ಒಳಕಡಮ ನಿವಾಸಿ ವಿಶ್ವನಾಥ ಗೌಡ (50) ಅವರು ಮೃತಪಟ್ಟವರು. ಅವರು ತಮ್ಮ ಜೀಪನ್ನು ದುರಸ್ತಿಗೊಳಪಡಿಸಿ ಹೊಸ ಬಣ್ಣ ಬಳಿದು ಅದರ ವಯರಿಂಗ್‌ ಬದಲಾಯಿಸಲು ಗ್ಯಾರೇಜೊಂದರಲ್ಲಿ ಮಾತುಕತೆ ನಡೆಸಿದ್ದರು.

ಅನಂತರ ಉಪ್ಪಿನಂಗಡಿಯ ಖಾಸಗಿ ನರ್ಸಿಂಗ್‌ ಹೋಂ ಬಳಿ ಜೀಪನ್ನು ನಿಲ್ಲಿಸುತ್ತಿದ್ದಂತೆಯೇ ಹೃದಯ ಸ್ತಂಭನಕ್ಕೆ ತುತ್ತಾಗಿ ಜೀಪಿನಲ್ಲೇ ಮೃತಪಟ್ಟರು. ಮೃತರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next