Advertisement

ಮಲ್ಪೆ: ಚಲಿಸುತ್ತಿದ್ದ ಸ್ಕೂಟರ್‌ನಲ್ಲೇ ಹೃದಯಾಘಾತವಾಗಿ ವ್ಯಕ್ತಿ ಸಾವು

08:01 PM May 19, 2022 | Team Udayavani |

ಮಲ್ಪೆ: ಮೀನುಗಾರಿಕೆ ಮುಗಿಸಿಕೊಂಡು ಸ್ಕೂಟರ್‌ನಲ್ಲಿ ಹಿಂಬದಿ ಸವಾರನಾಗಿ ಮನೆಗೆ ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿ ಮೀನುಗಾರನೋರ್ವ ಮೃತಪಟ್ಟ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಮೇ 18ರಂದು ಸಂಭವಿಸಿದೆ.

Advertisement

ಮಲ್ಪೆ ಕಂಬಳತೋಟ ನಿವಾಸಿ ಪ್ರತಾಪ್‌ (32) ಮೃತಪಟ್ಟ ಮೀನುಗಾರ.

ಬೆಳಗ್ಗೆ ಮೀನುಗಾರಿಕೆ ಮುಗಿಸಿಕೊಂಡು ಅಕ್ಕನ ಮಗ ಕಿರಣ್‌ ಅವರ ಸ್ಕೂಟರ್‌ನಲ್ಲಿ ಹಿಂಬದಿ ಸವಾರನಾಗಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಪ್ರತಾಪ್‌ ದಿಢೀರ್‌ ಅಸ್ವಸ್ಥಗೊಂಡು ಕಿರಣ್‌ ಮೈಮೇಲೆ ಬಿದ್ದಿದ್ದರು. ತತ್‌ಕ್ಷಣವೇ ಕಲ್ಯಾಣಪುರ ಗೊರಟ್ಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಹೆಚ್ಚಿನ ಚಿಕಿತ್ಸೆಗೆ ಉಡುಪಿ ಹೈಟೆಕ್‌ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಪ್ರತಾಪ್‌ ಅದಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next